Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...