Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...