Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...