Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...