Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...