Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...