Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...