Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...