Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...