Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...