Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...