Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...