Homeಮುಖಪುಟಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಜೋಶುವ ಅವರ ಸ್ಟಾಂಡಪ್ ಹಾಸ್ಯ ವೈರಲಾಗಿದ್ದು, ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

- Advertisement -
- Advertisement -

ಛತ್ರಪತಿ ಶಿವಾಜಿಯನ್ನು ಅವಮಾನಿಸಿದ ಆರೋಪದ ಮೇಲೆ ಮುಂಬೈ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟಿ ಅಗ್ರಿಮಾ ಜೋಶುವಾಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಲಾಗಿದೆ.

ಜೋಶುವಾ ಅವರ ಹಾಸ್ಯಗಳು ಮಹಾರಾಷ್ಟ್ರದ ಆಡಳಿತಾರೂಡ ಪಕ್ಷ ಶಿವಸೇನೆಯನ್ನು ಅಸಮಾಧಾನಗೊಳಿಸಿದ್ದು, ಗೃಹ ಸಚಿವ ಅನಿಲ್ ದೇಶ್ಮುಖ್ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರಿ ನಿಂದನೆ ಎದುರಿಸಿದ ನಂತರ ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದರು.

ಆದರೆ ಬೆದರಿಕೆಗಳು ನಿಂತಿಲ್ಲ ಎನ್ನಲಾಗಿದ್ದು, ಯೂಟ್ಯೂಬ್‌ನಲ್ಲಿ ಭಾರಿ ಅನುಯಾಯಿಗಳನ್ನು ಹೊಂದಿರುವ ಸಾಮಾಜಿಕ ಜಾಲತಾಣ ಬಳಕೆದಾರ ಶುಭಮ್ ಮಿಶ್ರಾ ಅಸಭ್ಯ ಭಾಷೆ ಬಳಸಿ ಮತ್ತು ಜೋಶುವಾ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಜುಲೈ 12 ರ ಭಾನುವಾರ ವಡೋದರಾ ಪೊಲೀಸರು ಈ ವಿಷಯದಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಂಡು, ಮಿಶ್ರಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು. ಈ ವಿಷಯದಲ್ಲಿ ಶೀಘ್ರದಲ್ಲೇ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಅನೇಕ ಸ್ಟ್ಯಾಂಡ್-ಅಪ್ ಹಾಸ್ಯನಟರು ಮತ್ತು ಬಾಲಿವುಡ್ ನಟರು ವೀಡಿಯೊದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಷಯವನ್ನು ಗಣನೆಗೆ ತೆಗೆದುಕೊಂಡಿದೆ. ಮಿಶ್ರಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಗುಜರಾತ್ ಪೊಲೀಸರನ್ನು ಕೋರಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಬರೆದಿದೆ.

ಅಗ್ರಿಮಾ ಜೋಶುವಾ ವಿವಾದದ ಮಧ್ಯೆ ಏಕೆ?

ಮುಂಬೈನ ಖಾರ್ (ಪಶ್ಚಿಮ) ದಲ್ಲಿ ಹಾಸ್ಯ ಮತ್ತು ಸಂಗೀತ ಕೆಫೆಯಲ್ಲಿ ಪ್ರದರ್ಶನ ನೀಡುತ್ತಿರುವ ಜೋಶುವಾ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ಅರೇಬಿಯನ್ ಸಮುದ್ರದಲ್ಲಿ ಮರಾಠಾ ರಾಜನ ಮುಂಬರುವ ಪ್ರತಿಮೆಯ ಬಗ್ಗೆ ಹಾಸ್ಯ ಮಾಡಿದ್ದಾರೆ. ಕಳೆದ ವರ್ಷ ಈ ವಿಡಿಯೊ ಕೋಲಾಹಲ ಸೃಷ್ಟಿಸಿತ್ತು, ಈಗ ಮತ್ತೊಮ್ಮೆ ಶಿವಸೇನೆಯ ಥಾಣೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಜೋಶುವಾ ಅವರ ಬಂಧನಕ್ಕೆ ಒತ್ತಾಯಿಸಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಡಿಲೀಟ್ ಮಾಡಲಾಗಿರುವ ವೀಡಿಯೊದಲ್ಲಿ, ಅರಬ್ಬಿ ಸಮುದ್ರದಲ್ಲಿ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯ ಊಹಾಪೋಹಗಳ ಬಗ್ಗೆ ಜೋಶುವ ಹಾಸ್ಯ ಮಾಡಿದ್ದರು.

ಶನಿವಾರ ಮಧ್ಯಾಹ್ನ ಈ ವಿಷಯದ ಬಗ್ಗೆ ತಿಳಿದುಕೊಂಡ ದೇಶ್ಮುಖ್ “ನಾನು ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿ (ಪೊಲೀಸ್ ಆಯುಕ್ತ) ಮುಂಬೈ ಮತ್ತು ಐಜಿ (ಇನ್ಸ್‌ಪೆಕ್ಟರ್ ಜನರಲ್) ಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬರೂ ಶಾಂತವಾಗಿರಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ” ಎಂದಿದ್ದಾರೆ.

ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೋಶುವ ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

ವಿವಾದ ಹೆಚ್ಚಾಗುತ್ತಿದ್ದಂತೆ, ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದರು. “ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ ಅನೇಕ ಅನುಯಾಯಿಗಳ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ನನಗೆ ವಿಷಾದವಿದೆ. ನಾನು ಪ್ರಾಮಾಣಿಕವಾಗಿ ಗೌರವಿಸುವ ಮಹಾನ್ ನಾಯಕನ ಅನುಯಾಯಿಗಳಿಗೆ ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇವೆ. ವೀಡಿಯೊವನ್ನು ಈಗಾಗಲೇ ತೆಗೆದುಹಾಕಲಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಜೋಶುವಾ ಕೇಳಿಕೊಂಡಿದ್ದಾರೆ.


ಇದನ್ನೂ ಓದಿ: ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...