Homeಮುಖಪುಟಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಜೋಶುವ ಅವರ ಸ್ಟಾಂಡಪ್ ಹಾಸ್ಯ ವೈರಲಾಗಿದ್ದು, ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

- Advertisement -
- Advertisement -

ಛತ್ರಪತಿ ಶಿವಾಜಿಯನ್ನು ಅವಮಾನಿಸಿದ ಆರೋಪದ ಮೇಲೆ ಮುಂಬೈ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟಿ ಅಗ್ರಿಮಾ ಜೋಶುವಾಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಲಾಗಿದೆ.

ಜೋಶುವಾ ಅವರ ಹಾಸ್ಯಗಳು ಮಹಾರಾಷ್ಟ್ರದ ಆಡಳಿತಾರೂಡ ಪಕ್ಷ ಶಿವಸೇನೆಯನ್ನು ಅಸಮಾಧಾನಗೊಳಿಸಿದ್ದು, ಗೃಹ ಸಚಿವ ಅನಿಲ್ ದೇಶ್ಮುಖ್ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರಿ ನಿಂದನೆ ಎದುರಿಸಿದ ನಂತರ ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದರು.

ಆದರೆ ಬೆದರಿಕೆಗಳು ನಿಂತಿಲ್ಲ ಎನ್ನಲಾಗಿದ್ದು, ಯೂಟ್ಯೂಬ್‌ನಲ್ಲಿ ಭಾರಿ ಅನುಯಾಯಿಗಳನ್ನು ಹೊಂದಿರುವ ಸಾಮಾಜಿಕ ಜಾಲತಾಣ ಬಳಕೆದಾರ ಶುಭಮ್ ಮಿಶ್ರಾ ಅಸಭ್ಯ ಭಾಷೆ ಬಳಸಿ ಮತ್ತು ಜೋಶುವಾ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಜುಲೈ 12 ರ ಭಾನುವಾರ ವಡೋದರಾ ಪೊಲೀಸರು ಈ ವಿಷಯದಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಂಡು, ಮಿಶ್ರಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು. ಈ ವಿಷಯದಲ್ಲಿ ಶೀಘ್ರದಲ್ಲೇ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಅನೇಕ ಸ್ಟ್ಯಾಂಡ್-ಅಪ್ ಹಾಸ್ಯನಟರು ಮತ್ತು ಬಾಲಿವುಡ್ ನಟರು ವೀಡಿಯೊದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಷಯವನ್ನು ಗಣನೆಗೆ ತೆಗೆದುಕೊಂಡಿದೆ. ಮಿಶ್ರಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಗುಜರಾತ್ ಪೊಲೀಸರನ್ನು ಕೋರಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಬರೆದಿದೆ.

ಅಗ್ರಿಮಾ ಜೋಶುವಾ ವಿವಾದದ ಮಧ್ಯೆ ಏಕೆ?

ಮುಂಬೈನ ಖಾರ್ (ಪಶ್ಚಿಮ) ದಲ್ಲಿ ಹಾಸ್ಯ ಮತ್ತು ಸಂಗೀತ ಕೆಫೆಯಲ್ಲಿ ಪ್ರದರ್ಶನ ನೀಡುತ್ತಿರುವ ಜೋಶುವಾ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ಅರೇಬಿಯನ್ ಸಮುದ್ರದಲ್ಲಿ ಮರಾಠಾ ರಾಜನ ಮುಂಬರುವ ಪ್ರತಿಮೆಯ ಬಗ್ಗೆ ಹಾಸ್ಯ ಮಾಡಿದ್ದಾರೆ. ಕಳೆದ ವರ್ಷ ಈ ವಿಡಿಯೊ ಕೋಲಾಹಲ ಸೃಷ್ಟಿಸಿತ್ತು, ಈಗ ಮತ್ತೊಮ್ಮೆ ಶಿವಸೇನೆಯ ಥಾಣೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಜೋಶುವಾ ಅವರ ಬಂಧನಕ್ಕೆ ಒತ್ತಾಯಿಸಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಡಿಲೀಟ್ ಮಾಡಲಾಗಿರುವ ವೀಡಿಯೊದಲ್ಲಿ, ಅರಬ್ಬಿ ಸಮುದ್ರದಲ್ಲಿ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯ ಊಹಾಪೋಹಗಳ ಬಗ್ಗೆ ಜೋಶುವ ಹಾಸ್ಯ ಮಾಡಿದ್ದರು.

ಶನಿವಾರ ಮಧ್ಯಾಹ್ನ ಈ ವಿಷಯದ ಬಗ್ಗೆ ತಿಳಿದುಕೊಂಡ ದೇಶ್ಮುಖ್ “ನಾನು ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿ (ಪೊಲೀಸ್ ಆಯುಕ್ತ) ಮುಂಬೈ ಮತ್ತು ಐಜಿ (ಇನ್ಸ್‌ಪೆಕ್ಟರ್ ಜನರಲ್) ಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬರೂ ಶಾಂತವಾಗಿರಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ” ಎಂದಿದ್ದಾರೆ.

ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೋಶುವ ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

ವಿವಾದ ಹೆಚ್ಚಾಗುತ್ತಿದ್ದಂತೆ, ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದರು. “ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ ಅನೇಕ ಅನುಯಾಯಿಗಳ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ನನಗೆ ವಿಷಾದವಿದೆ. ನಾನು ಪ್ರಾಮಾಣಿಕವಾಗಿ ಗೌರವಿಸುವ ಮಹಾನ್ ನಾಯಕನ ಅನುಯಾಯಿಗಳಿಗೆ ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇವೆ. ವೀಡಿಯೊವನ್ನು ಈಗಾಗಲೇ ತೆಗೆದುಹಾಕಲಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಜೋಶುವಾ ಕೇಳಿಕೊಂಡಿದ್ದಾರೆ.


ಇದನ್ನೂ ಓದಿ: ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...