Homeಮುಖಪುಟಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಜೋಶುವ ಅವರ ಸ್ಟಾಂಡಪ್ ಹಾಸ್ಯ ವೈರಲಾಗಿದ್ದು, ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

- Advertisement -
- Advertisement -

ಛತ್ರಪತಿ ಶಿವಾಜಿಯನ್ನು ಅವಮಾನಿಸಿದ ಆರೋಪದ ಮೇಲೆ ಮುಂಬೈ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟಿ ಅಗ್ರಿಮಾ ಜೋಶುವಾಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಲಾಗಿದೆ.

ಜೋಶುವಾ ಅವರ ಹಾಸ್ಯಗಳು ಮಹಾರಾಷ್ಟ್ರದ ಆಡಳಿತಾರೂಡ ಪಕ್ಷ ಶಿವಸೇನೆಯನ್ನು ಅಸಮಾಧಾನಗೊಳಿಸಿದ್ದು, ಗೃಹ ಸಚಿವ ಅನಿಲ್ ದೇಶ್ಮುಖ್ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರಿ ನಿಂದನೆ ಎದುರಿಸಿದ ನಂತರ ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದರು.

ಆದರೆ ಬೆದರಿಕೆಗಳು ನಿಂತಿಲ್ಲ ಎನ್ನಲಾಗಿದ್ದು, ಯೂಟ್ಯೂಬ್‌ನಲ್ಲಿ ಭಾರಿ ಅನುಯಾಯಿಗಳನ್ನು ಹೊಂದಿರುವ ಸಾಮಾಜಿಕ ಜಾಲತಾಣ ಬಳಕೆದಾರ ಶುಭಮ್ ಮಿಶ್ರಾ ಅಸಭ್ಯ ಭಾಷೆ ಬಳಸಿ ಮತ್ತು ಜೋಶುವಾ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಜುಲೈ 12 ರ ಭಾನುವಾರ ವಡೋದರಾ ಪೊಲೀಸರು ಈ ವಿಷಯದಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಂಡು, ಮಿಶ್ರಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು. ಈ ವಿಷಯದಲ್ಲಿ ಶೀಘ್ರದಲ್ಲೇ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಅನೇಕ ಸ್ಟ್ಯಾಂಡ್-ಅಪ್ ಹಾಸ್ಯನಟರು ಮತ್ತು ಬಾಲಿವುಡ್ ನಟರು ವೀಡಿಯೊದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಷಯವನ್ನು ಗಣನೆಗೆ ತೆಗೆದುಕೊಂಡಿದೆ. ಮಿಶ್ರಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಗುಜರಾತ್ ಪೊಲೀಸರನ್ನು ಕೋರಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಬರೆದಿದೆ.

ಅಗ್ರಿಮಾ ಜೋಶುವಾ ವಿವಾದದ ಮಧ್ಯೆ ಏಕೆ?

ಮುಂಬೈನ ಖಾರ್ (ಪಶ್ಚಿಮ) ದಲ್ಲಿ ಹಾಸ್ಯ ಮತ್ತು ಸಂಗೀತ ಕೆಫೆಯಲ್ಲಿ ಪ್ರದರ್ಶನ ನೀಡುತ್ತಿರುವ ಜೋಶುವಾ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ಅರೇಬಿಯನ್ ಸಮುದ್ರದಲ್ಲಿ ಮರಾಠಾ ರಾಜನ ಮುಂಬರುವ ಪ್ರತಿಮೆಯ ಬಗ್ಗೆ ಹಾಸ್ಯ ಮಾಡಿದ್ದಾರೆ. ಕಳೆದ ವರ್ಷ ಈ ವಿಡಿಯೊ ಕೋಲಾಹಲ ಸೃಷ್ಟಿಸಿತ್ತು, ಈಗ ಮತ್ತೊಮ್ಮೆ ಶಿವಸೇನೆಯ ಥಾಣೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಜೋಶುವಾ ಅವರ ಬಂಧನಕ್ಕೆ ಒತ್ತಾಯಿಸಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಡಿಲೀಟ್ ಮಾಡಲಾಗಿರುವ ವೀಡಿಯೊದಲ್ಲಿ, ಅರಬ್ಬಿ ಸಮುದ್ರದಲ್ಲಿ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯ ಊಹಾಪೋಹಗಳ ಬಗ್ಗೆ ಜೋಶುವ ಹಾಸ್ಯ ಮಾಡಿದ್ದರು.

ಶನಿವಾರ ಮಧ್ಯಾಹ್ನ ಈ ವಿಷಯದ ಬಗ್ಗೆ ತಿಳಿದುಕೊಂಡ ದೇಶ್ಮುಖ್ “ನಾನು ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿ (ಪೊಲೀಸ್ ಆಯುಕ್ತ) ಮುಂಬೈ ಮತ್ತು ಐಜಿ (ಇನ್ಸ್‌ಪೆಕ್ಟರ್ ಜನರಲ್) ಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬರೂ ಶಾಂತವಾಗಿರಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ” ಎಂದಿದ್ದಾರೆ.

ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೋಶುವ ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

ವಿವಾದ ಹೆಚ್ಚಾಗುತ್ತಿದ್ದಂತೆ, ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದರು. “ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ ಅನೇಕ ಅನುಯಾಯಿಗಳ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ನನಗೆ ವಿಷಾದವಿದೆ. ನಾನು ಪ್ರಾಮಾಣಿಕವಾಗಿ ಗೌರವಿಸುವ ಮಹಾನ್ ನಾಯಕನ ಅನುಯಾಯಿಗಳಿಗೆ ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇವೆ. ವೀಡಿಯೊವನ್ನು ಈಗಾಗಲೇ ತೆಗೆದುಹಾಕಲಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಜೋಶುವಾ ಕೇಳಿಕೊಂಡಿದ್ದಾರೆ.


ಇದನ್ನೂ ಓದಿ: ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...