Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...