Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...