Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...