Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...