Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...