Homeಆರೋಗ್ಯಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

ಉರಿವ ಮನೆಯಲ್ಲಿ ಗಳ ಹಿರಿಯುವವರು, ಸಾವಿನ ಮನೆಯಲ್ಲಿ ಟಿಆರ್‍ಪಿ ವರದಿಗಾರರು

- Advertisement -
- Advertisement -

| ಮಲ್ಲನಗೌಡರ್ |

ಬಿಹಾರದಲ್ಲಿ ಸರ್ಕಾರದ ನಿರ್ಲಕ್ಷ್ಯತನದಿಂದ, ಬೇಜವಾಬ್ದಾರಿಯಿಂದ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ, ಸಾವಿರಕ್ಕೂ ಹೆಚ್ಚು ಮಕ್ಕಳು ಜೀವನ್ಮರಣದ ನಡುವೆ ಹೋರಾಡುತ್ತಿವೆ. ಈ ಸಮಯದಲ್ಲಿ ಪ್ರಭುತ್ವವನ್ನು ಗುರಿಯಾಗಿಸಿ ವರದಿಗಾರಿಕೆ ಮಾಡಬೇಕಿದ್ದ ಬಹುಪಾಲು ಮಾಧ್ಯಮಗಳ ವರದಿಗಾರರು, ಆಸ್ಪತ್ರೆಗಳ ಐಸಿಯುಗಳಿಗೆ ಅನಾಗರಿಕರಂತೆ ನುಗ್ಗಿ ವೈದ್ಯರು ಮತ್ತು ದಾದಿಯರ ಮೇಲೆ ಮುಗಿಬಿದ್ದು ಕರ್ತವ್ಯಕ್ಕೆ ಅಡ್ಡಿ ಮಾಡಿರುವ ವಿದ್ಯಮಾನಗಳು ಜರುಗಿವೆ. ಟಿಆರ್‍ಪಿಗಾಗಿ ಸಾವಿನ ಮನೆಯಲ್ಲೂ ಸಂತೆ ಮಾಡುತ್ತಿರುವ ಚಾನೆಲ್‍ಗಳು ‘ಜರ್ನಲಿಸಂ ಇನ್ ಐಸಿಯು’ ಎಂಬ ಟೀಕೆಗೆ ಗುರಿಯಾಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟಿವಿ ವರದಿಗಾರರು, ಆ್ಯಂಕರ್‍ಗಳು ಮತ್ತು ಕ್ಯಾಮೆರಾಮನ್‍ಗಳ ಈ ಹುಚ್ಚಾಟದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಆರೋಗ್ಯ ಮಂತ್ರಿ, ಬಿಹಾರದ ಆರೋಗ್ಯ ಸಚಿವ ಮತ್ತು ಅಲ್ಲಿನ ಮುಖ್ಯಮಂತ್ರಿಗಳನ್ನ ತರಾಟೆಗೆ ತೆಗೆದುಕೊಳ್ಳುವುದುನ್ನು ಬಿಟ್ಟ ಹಲವು ಟಿವಿ ವರದಿಗಾರರು, ಅಸ್ವಸ್ಥ ಮಕ್ಕಳಿರುವ ವಾರ್ಡುಗಳಿಗೆ ನುಗ್ಗಿ ಸೇವೆಯಲ್ಲಿ ನಿರತರಾಗಿದ್ದ ವೈದ್ಯರು, ಅಟೆಂಡರುಗಳು ಮತ್ತು ನರ್ಸ್‍ಗಳ ಮೇಲೆ ಮುಗಿಬಿದ್ದು ಜಬರದಸ್ತಿನಲ್ಲಿ ಬೈದು ವರದಿ ಮಾಡಿದ್ದಾರೆ. ಇದರಿಂದ ಮಕ್ಕಳ ಔಷೋಧಪಚಾರಕ್ಕೆ ಅಡ್ಡಿಯುಂಟಾಗಿದೆ. ಅದರ ವಿಡಿಯೋ ನೋಡಿ

ಚಾನೆಲ್‍ಗಳು ಹೀಗೆ ಮಾಡಿದ್ದು ಮಕ್ಕಳ ಬಗ್ಗೆ ಕಾಳಜಿಯಿಂದಲ್ಲ, ಬದಲು ಇಂತಹ ಸಾಹಸಗಳಿಂದ ತಮ್ಮ ಟಿಆರ್‍ಪಿ ಏರಿಸಿಕೊಳ್ಳುವ ಹುನ್ನಾರ ಸ್ಪಷ್ಟವಾಗಿ ಕಂಡುಬರುತ್ತಿತ್ತು. ಆಜ್‍ತಕ್ (ಅಲ್ಲಿ ಬಿಹಾರ್ ತಕ್)ನ ನಿರೂಪಕಿ/ ವರದಿಗಾರ್ತಿ ಅಂಜನಾ ಓಂ ಕಶ್ಯಪ್ ಮೊದಲು 3ನೇ ವಾರ್ಡಿಗೆ ನುಗ್ಗಿ ಮಕ್ಕಳ ಪೋಷಕರನ್ನು ಮಾತಾಡಿಸಿದ್ದಾರೆ. ಈ ಎಲ್ಲದರ ಕುರಿತು ತಮಗೆ ಹೇಗೆ ಅನಿಸುತ್ತಿದೆ ಎಂಬ ಮೂರ್ಖ, ಅಸಂಬದ್ಧ ಪ್ರಶ್ನೆಯನ್ನು ಎತ್ತಿದ್ದಾರೆ.

ಟ್ರೀಟ್‍ಮೆಂಟ್‍ ಮಾಡುತ್ತಿದ್ದ ವೈದ್ಯರೊಬ್ಬರ ಮೇಲೆ ನೇರ ಆಕ್ರಮಣ ಮಾಡಿ, ಎಲ್ಲಿದ್ದೀರಾ ನೀವೆಲ್ಲ? ವಾರ್ಡಿನಲ್ಲಿ ತಾಸಿನಿಂದ ನೋಡ್ತಾನೇ ಇದ್ದೇನೆ. ನಿಮಗೆ ಮಕ್ಕಳ ಮೇಲೆ ಕಾಳಜಿನೇ ಇಲ್ಲ’ ಎಂದು ಅರಚಾಡಿದ್ದಾರೆ. ಮೂಲಭೂತ ಸೌಕರ್ಯ ಕಡಿಮೆಯಿದೆ, ಸ್ಟಾಫ್ ಕೊರತೆಯಿದೆ, ನಾವೀಗ ಮಕ್ಕಳ ಟ್ರೀಟ್‍ಮೆಂಟಿನಲ್ಲೇ ತೊಡಗಿದ್ದೇವಲ್ಲ’ ಎಂದು ಹೇಳುವ ವೈದ್ಯರ ಮಾತನ್ನು ಪರಿಗಣಿಸದೇ ಅರ್ಭಟಿಸಿದ್ದಾರೆ. ಈ ಸಾಹಸಿ ಜರ್ನಲಿಸ್ಟ್ ನಂತರ ಶೂ ಹಾಕಿಕೊಂಡು, ಕ್ಯಾಮೆರಾಮನ್ ಕರೆದುಕೊಂಡು ಐಸಿಯುಗೇ ನುಗ್ಗಿ ರಾದ್ದಾಂತ ಮಾಡಿದ್ದಾರೆ. ಆ ಮೂಲಕ ನಿಯಮ ಉಲ್ಲಂಘನೆ ಮಾಡಿ, ಐಸಿಯುನ ವಾತಾವರಣವನ್ನೂ ಹಾಳು ಮಾಡಿದ್ದಾರೆ. ಒಂದಿಷ್ಟು ಸೂಕ್ಷ್ಮತೆಯಿಲ್ಲದ ಅಂಜನಾರ ಈ ಹುಚ್ಚಾಟವನ್ನು ಇತರ ಸ್ಥಳೀಯ ವರದಿಗಾರರೂ ಅನುಕರಿಸಿದ್ದಾರೆ.

ನಿಜಕ್ಕೂ ದುರಂತದ ಬಗ್ಗೆ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಸರ್ಕಾರದ ವಿರುದ್ಧ ಧ್ವನಿ ಎತ್ತಿ ವರದಿಗಾರಿಕೆ ಮಾಡಬೇಕಿತ್ತು. ದೆಹಲಿಯ ಆಸ್ಪತ್ರೆಗಳಲ್ಲಿ ಸಮಸ್ಯೆಯಾದಾಗ ಅಲ್ಲಿನ ಮುಖ್ಯಮಂತ್ರಿಗಳನ್ನು ಚಾನೆಲ್‍ಗಳನ್ನು ತರಾಟೆಗೆ ತೆಗೆದುಕೊಂಡಿದ್ದವು. ಇದು ಸರಿ, ಆದರೆ ಬಿಹಾರದಲ್ಲಿ, ಉತ್ತರಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂತಹ ದುರಂತ ಸಂಭವಿಸಿದಾಗ ಈ ಚಾನೆಲ್ ಗಳು ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಅಲ್ಲಿನ ಅಸಹಾಯಕ ಡಾಕ್ಟರು, ನರ್ಸ್‍ಗಳ ಮೇಲಷ್ಟೇ ಎಗರಾಡುವುದನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.

ಆಸ್ಪತ್ರೆಯ ಹೊರಗೆ ಮಕ್ಕಳ ಸಂಬಂಧಿಕರು ಮತ್ತು ಪೋಷಕರು ಮುಖ್ಯಮಂತ್ರಿ ನಿತೀಶ್ ಮತ್ತು ಕೇಂದ್ರರ ಆರೋಗ್ಯ ಸಚಿವ ಹರ್ಷವರ್ಧನ್ ರವರ ವಿರುದ್ದ ಪ್ರತಿಭಟನೆ ನಡೆಸಿದ ಮೇಲಾದರೂ ಮಾಧ್ಯಮಗಳಿಗೆ ಅರಿವಾಗಿ ಸರ್ಕಾರಗಳನ್ನು ಪ್ರಶ್ನಿಸಬೇಕಿತ್ತಲ್ಲವೇ? ಊಹು ಆಗಲೇ ಇಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಅಲ್ಟ್ ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾ, ‘ಇದು ಆಜ್‍ತಕ್‍ನ ಸಾಹಸಿ ಪತ್ರಿಕೋದ್ಯಮ! ಅಸ್ವಸ್ಥ ಮಕ್ಕಳನ್ನು ಉಪಚರಿಸುತ್ತಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ಕಿರುಕುಳ ನೀಡುವುದು! ಈ ಆಕ್ರೋಶದ ಶೇ.10ರಷ್ಟನ್ನಾದರೂ ರಾಜಕಾರಣಿಗಳ ಮೇಲೆ ತೋರಿಸಿದ್ದರೆ ಒಂದಿಷ್ಟಾದರೂ ಪ್ರಯೋಜನವಾಗುತ್ತಿತ್ತು’ ಎಂದಿದ್ದಾರೆ.

“ಕೊನೆಗೂ ಭಾರತದ ಆರೋಗ್ಯ ಸಂಕಷ್ಟದ ಬಗ್ಗೆ ಟ್ವೀಟ್ ಮಾಡಲು ನರೇಂದ್ರ ಮೋದಿಯವರಿಗೆ ಸಮಯ ಸಿಕ್ಕಿದೆ. ಅವರು ಶಿಖರ್ ಧವನ್ ಬೇಗ ಗುಣಮುಖವಾಗಲೆಂದು ಹಾರೈಸಿದ್ದಾರೆ” ಎಂದು ಖ್ಯಾತ ಯುವ ಚಿಂತಕ ಧೃವ್ ರಾಠೀ ವ್ಯಂಗ್ಯದ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಗಾಯದ ಕಾರಣದಿಂದಾಗಿ ವಿಶ್ವಕಪ್ ಕ್ರಿಕೆಟ್‍ನಿಂದ ಹೊರಗುಳಿದ ಶಿಖರ್ ಧವನ್‍ರ ಬಗ್ಗೆ ಕಾಳಜಿ ವಹಿಸುವ ಪ್ರಧಾನಿಗೆ, ಈ ಮಕ್ಕಳ ನೆನಪೂ ಕಾಡಲಿಲ್ಲವೇ ಎಂಬಂತಹ ಪ್ರಶ್ನೆಗಳನ್ನಿಟ್ಟು ಚರ್ಚೆ ಮಾಡದೇ ಪಲಾಯನ ಮಾಡುತ್ತಿರುವ ಮಾಧ್ಯಮಗಳಿಗೆ, ಕಳೆದ ಚುನಾವಣೆಗೆ ಮೊದಲು ಬಜೆಟ್‍ನಲ್ಲಿ ಪ್ರಸ್ತಾಪಿಸಿದ ಆಯುಷ್ಮಾನ್ ಯೋಜನೆ ಸಾಧಿಸಿದ್ದೇನು? ಎಂಬ ಪ್ರಶ್ನೆಯೂ ಕಾಡುತ್ತಿಲ್ಲ.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜುಜುಬಿ ಅನುದಾನ ನೀಡುತ್ತಿರುವ ಸರ್ಕಾರಗಳ ನೀತಿಗಳು, ಈ ಎರಡೂ ಕ್ಷೇತ್ರಗಳನ್ನೂ ಹಂತಹಂತವಾಗಿ ಖಾಸಗೀಕರಣ ಮಾಡುತ್ತ ಬಂದಿರುವುದೇ ಇಂತಹ ದುರಂತಗಳ ಮೂಲ ಅಲ್ಲವೇ? ವಿಪರೀತ ನಿಯಮಗಳ ಆಯುಷ್ಮಾನ್ ಯೋಜನೆಯ ಅಂತಿಮ ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ವಿಮಾ ಕಂಪನಿಗಳಷ್ಟೇ…ಈ ಕುರಿತಾಗಿ ಚರ್ಚೆ ಹುಟ್ಟು ಹಾಕಬೇಕಿದ್ದ ಮಾಧ್ಯಮಗಳು ಟಿ.ಆರ್.ಪಿ ಯ ಸುತ್ತ ಗಿರಕಿ ಹೊಡೆಯುತ್ತ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...