Homeಅಂಕಣಗಳುಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

ಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

- Advertisement -
- Advertisement -

ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಟ್ಟಾಗ ನಾನು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷನಾಗಿದ್ದೆ. 1932ರಲ್ಲಿ ಡಿ.ವಿ.ಗುಂಡಪ್ಪನವರ ಅಧ್ಯಕ್ಷತೆಯಲ್ಲಿ ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಆರಂಭವಾಯಿತು. ವಿಶ್ವ ಕರ್ನಾಟಕ ಪತ್ರಿಕೆಯ ಸಂಪಾದಕರಾದ ತಿರುಮಲೆ ತಾತಾಚಾರ್ಯ ಶರ್ಮರು ಆ ಸಂಸ್ಥೆಯ ಪ್ರಥಮ ಕಾರ್ಯದರ್ಶಿ. ಈ ಸಂಘಕ್ಕೆ ಘಟಾನುಘಟಿಗಳು ಅಧ್ಯಕ್ಷರಾಗಿದ್ದರು. ಈ ಸಂಘ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಾಗಿ ಮಾರ್ಪಟ್ಟ ಮೇಲೂ ಪೋತನ್ ಜೋಸೆಫ್, ಸೀತಾರಾಮ ಶಾಸ್ತ್ರಿ, ಜಯಶೀಲರಾವ್, ಗಂಗಾಧರ ಮೊದಲಿಯಾರ್, ಕೆ.ಎಂ.ನಾಗರಾಜ್ ಮುಂತಾದ ಖ್ಯಾತ ಪತ್ರಿಕೋದ್ಯಮಿಗಳು ಸಂಘದ ಅಧ್ಯಕ್ಷರಾಗಿದ್ದು ಸಂಘವನ್ನು ಉಜ್ಛ್ರಾಯ ಸ್ಥಿತಿಗೆ ತಂದರು. ಆದರೆ ಕಳೆದ 4-6 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ತನ್ನ ಕೈವಶದಲ್ಲಿ ಇಟ್ಟುಕೊಂಡು ಕಾನೂನು ಕಟ್ಟಲೆಗಳನ್ನೆಲ್ಲವನ್ನೂ ಗಾಳಿಗೆ ತೂರಿ ಲಕ್ಷಾಂತರ ರೂಪಾಯಿಗಳನ್ನು ಗುಳುಂ ಮಾಡಿದ ರಾಜು ಎಂಬಾತ ಘನತೆವೆತ್ತ ಪತ್ರಕರ್ತರ ಸಂಘವನ್ನು ಅಧೋಗತಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಹಲಸೂರು ಪೋಲೀಸ್ ಠಾಣೆಗೆ 25-09-2018ರಲ್ಲಿ ಬಂಗಲೆ ಮಲ್ಲಿಕಾರ್ಜುನ ಎಂಬ ಹೆಸರಿನ ಸಂಘದ ಸದಸ್ಯರು `ಅಧ್ಯಕ್ಷರಾಗಿರುವ ರಾಜು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2013ರಿಂದ 17ರವರೆಗೆ ಮತ್ತು 2018 ರಿಂದ 2021ರವರೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಂಘದ ನಿಶ್ಚಿತ ಠೇವಣಿ ಹಣ ಮತ್ತು ಇತರೆ ಬಾಬ್ತು ಹಣದ ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿ ದೂರು ಸಲ್ಲಿಸಿದರು. ಈ ಆರೋಪದ ಹಿನ್ನೆಲೆಯಲ್ಲಿ ಪೋಲೀಸರು ಕೇಸ್ ನಂ.0226/2018ನ್ನು ದಾಖಲೆ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜುರವರ ಮೇಲೆ 12/05/2004 ಚಿಕ್ಕಮಗಳೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 406/2008ರ ಅನ್ವಯ ಕ್ರಿಮಿನಲ್ ಪ್ರಕರಣ ಒಂದರಲ್ಲಿ 3 ತಿಂಗಳ ಶಿಕ್ಷೆ ಆಗಿರುವುದಾಗಿ ತಿಳಿದು ಬಂದಿದೆ. ಈ ಕಾರಣಕ್ಕಾಗಿ ರಾಜುರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಕಾರ್ಯಕಾರಣಿ ಸಮಿತಿ 5.10.2018ರಂದು ಸಭೆ ಸೇರಿ ರಾಜುರವರ ರಾಜೀನಾಮೆಯನ್ನು ಅಂಗೀಕರಿಸಿ ಶಿವಾನಂದ ತಗಡೂರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತು. ಅಲ್ಲದೇ ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ದುರ್ಬಳಕೆಯ ಬಗೆಗೆ ಲೆಕ್ಕ ಸಂಶೋಧನೆ ಮಾಡುವಂತೆ ಗುಡಿಹಳ್ಳಿ ನಾಗರಾಜ್ ಅಧ್ಯಕ್ಷತೆಯಲ್ಲಿ ಸಿ.ಕೆ.ಮಹೇಂದ್ರ, ರವಿಕುಮಾರ್, ರಮೇಶ್ ಕುಟ್ಟಪ್ಪ, ಗಣಪತಿ ಗಂಗೊಳ್ಳಿ ಮೊದಲಾದವರ ಸಮಿತಿ ರಚಿಸಿದ್ದಾರೆ. ಈ ಸಮಿತಿ ಕೂಲಂಕುಶವಾಗಿ ಲೆಕ್ಕ ಸಂಶೋಧನೆ ಮಾಡಿ ವರದಿ ಸಲ್ಲಿಸಿದೆ.
ಈ ವರದಿಯ ಸಾರಾಂಶ ಹೀಗಿದೆ. ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ಹಣಕಾಸು ಅವ್ಯವಹಾರಗಳು ನಡೆಸಿರುವುದು ಮೇಲ್ನೋಟಕ್ಕೆ ಕಂಡು¨ರುತ್ತದೆ. ಇದರಲ್ಲಿ ರಾಜುರವರ ಪಾತ್ರವು ನೇರವಾಗಿ ಕಂಡುಬರುತ್ತದೆ. ಜೊತೆಗೆ ಈ ಅವ್ಯವಹಾರಗಳಿಗೆ ಸಂಘದ ಪ್ರಧಾನ(ಧನ) ಕಾರ್ಯದರ್ಶಿ ಕೆ.ಜೆ.ಭೀಮನಗೌಡ ಹಾಗೂ ಖಜಾಂಚಿ ಕೂಡ ಜವಾಬ್ಧಾರರು ಎಂದು ಈ ವಿಚಾರಣಾ ಸಮಿತಿ ಅಭಿಪ್ರಾಯಪಟ್ಟಿದೆ. 2014-15ನೇ ಸಾಲಿನಲ್ಲಿ ಅಧ್ಯಕ್ಷ ರಾಜುರವರು ಪ್ರಯಾಣ ಭತ್ಯೆಯಾಗಿ 2,66,200 ರೂಗಳನ್ನು 2017-18ನೇ ಸಾಲಿನ ಲೆಕ್ಕಪತ್ರದಲ್ಲಿ 8,61,777 ರೂಗಳನ್ನೂ ಬಳಕೆ ಮಾಡಿಕೊಂಡಿದ್ದಾರೆ. ಈ ಮೂರು ಅವಧಿಯಲ್ಲಿ ರಾಜು ಭಾರೀ ಮೊತ್ತದ ಸಂಚಾರ ವೆಚ್ಚ ಮಾಡಿರುವುದು ಸೂಕ್ತವಲ್ಲ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ರಾಜು ನಿವೇಶನಕ್ಕಾಗಿ ಎಂದು ಹೇಳಿ ಬ್ಯಾಂಕುಗಳಿಂದ 26 ಲಕ್ಷ ರೂಗಳನ್ನು ತೆಗೆದಿದ್ದಾರೆ. ಸಂಘಕ್ಕೆ ನಿವೇಶನ ನೀಡಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿ ಸರ್ಕಾರ 20 ಗುಂಟೆ ಜಮೀನನ್ನು ನೀಡಲೂ ನಿರ್ಧರಿಸಿದೆ. ಆದರೆ ಈವರೆಗೆ ಸರ್ಕಾರದಿಂದ ಮಂಜೂರಾತಿ ಪತ್ರ ಸಂಘಕ್ಕೆ ಬಂದಿಲ್ಲ. ಕ್ರಯಪತ್ರ ರಿಜಿಸ್ಟಾರ್ ಆಗಿಲ್ಲ. ಸರ್ಕಾರ ಪುಕ್ಕಟ್ಟೆ ನಿವೇಶನ ಕೊಟ್ಟಿದ್ದರು ರಾಜುರವರು 26 ಲಕ್ಷ ರೂಗಳನ್ನು ನಿವೇಶನಕ್ಕಾಗಿ ಪಡೆದಿದ್ದಾರೆ. ನಿವೇಶನವನ್ನು ರಾಜು ಕೊಂಡುಕೊಂಡರೇ? ಹೇಗೆ?
ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಮ್ಮೇಳನ ನಡೆಯಿತು. ಈ ಸಮ್ಮೇಳನಕ್ಕೆ ಸರ್ಕಾರ 10 ಲಕ್ಷ ರೂಪಾಯಿ ನೀಡಿತ್ತು. ಸಮ್ಮೇಳನದ ಖರ್ಚಿಗೆಂದು ಶ್ರವಣಬೆಳಗೊಳದ ಜೈನಮಠ ಹಣ ನೀಡಿದೆ. ಹೀಗಿದ್ದರೂ ರಾಜುರವರು 11,39,949 ರೂಗಳನ್ನು ಸಂಘ ಅಧಿವೇಶನಕ್ಕೆ ಖರ್ಚು ಮಾಡಿರುವುದಾಗಿ ಲೆಕ್ಕ ಬರೆದಿದ್ದಾರೆ. ಸಂಘ ಅಧಿವೇಶನಕ್ಕಾಗಿ ಖರ್ಚು ಮಾಡಿದ ಬಗೆಗೆ ಒಂದು ವೋಚರೂ ಇಲ್ಲ ಎಂದು ತನಿಖಾ ತಂಡ ವರದಿ ಮಾಡಿದೆ. ಮೇಲ್ನೋಟಕ್ಕೆ ಹಣ ದುರುಪಯೋಗವಾದಂತೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಫಿಕ್ಸೆಡ್ ಡೆಪಾಸಿಟ್ ಹಣವನ್ನು ಅವಧಿ ಮುಗಿಯುವವರೆಗೂ ಬ್ಯಾಂಕಿನಿಂದ ತೆಗೆಯುವಂತಿಲ್ಲ ಆದರೆ ರಾಜುರವರು ಅನೇಕ ಠೇವಣಿ ಹಣವನ್ನು ಹಿಂತೆಗೆಯುವ ಚಾಳಿ ಬೆಳೆಸಿಕೊಂಡಿದ್ದರು.
ಹೀಗೆ ಕಾನೂನಿನ ಭಯವೂ ಇಲ್ಲದೆ ಸೆರೆಮನೆಗೆ ಹೋಗಬೇಕಾದ ಪ್ರಮೇಯ ಬರಬಹುದು ಎಂಬ ಪ್ರಜ್ಞೆಯೂ ಇಲ್ಲದೆ ಹುಂಬರಂತೆ ಸಂಘದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಶಾಸಕರಿಂದ ಶಾಸಕರ ನಿಧಿಯಲ್ಲಿ 2017-18 ಸಾಲಿನಲ್ಲಿ ಕೆ.ಜೆ.ಜಾರ್ಜ್‍ರವರು 5 ಲಕ್ಷ, ಕೆ.ಎಸ್.ಈಶ್ವರಪ್ಪನವರು 3 ಲಕ್ಷ, ವಿನಯ್ ಕುಲಕರ್ಣಿ ಒಂದು ಲಕ್ಷ, ಸಿ.ಪಿ.ಯೋಗೀಶ್ವರ್ 2.5 ಲಕ್ಷ ದೇಣಿಗೆ ನೀಡಿದ್ದಾರೆ.
ಹಲಸೂರು ಠಾಣೆಯ ಪೊಲೀಸ್ ಅಧಿಕಾರಿಗಳು ರಾಜುರವರನ್ನು ಬಂಧಿಸಿದ್ದರು. ಈಗ ರಾಜು ಹೈಕೋರ್ಟ್‍ನ ಮೊರೆ ಹೋಗಿದ್ದಾರೆ. ಸಂಘದ ಹಣ ನುಂಗಿರುವ ರಾಜುರವರಿಗೆ ಹೈಕೋರ್ಟ್‍ನಲ್ಲಿ ರಕ್ಷಣೆ ಸಿಗಬಾರದು. ಪತ್ರಕರ್ತರ ಸಂಘದಂತಹ ಘನತೆವೆತ್ತ ಸಂಸ್ಥೆಯಲ್ಲಿ ಈ ಹಗಲು ದರೋಡೆ ನಡೆದಿರುವುದು ಲಜ್ಬಾಸ್ಪದ ವಿಚಾರವಾಗಿದೆ. ಪೊಲೀಸರು ನಿಷ್ಠೆಯಿಂದ ನಡೆದುಕೊಂಡು ರಾಜುನಂತಹ ಹಗಲು ದರೋಡೆಕೋರರಿಗೆ ಪಾಠ ಕಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...