Homeಅಂಕಣಗಳುಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

ಪತ್ರಕರ್ತರು ಯಾಕೆ ಹೀಗಾಗುತ್ತಿದ್ದಾರೆ?

- Advertisement -
- Advertisement -

ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಟ್ಟಾಗ ನಾನು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷನಾಗಿದ್ದೆ. 1932ರಲ್ಲಿ ಡಿ.ವಿ.ಗುಂಡಪ್ಪನವರ ಅಧ್ಯಕ್ಷತೆಯಲ್ಲಿ ಮೈಸೂರು ಸಂಸ್ಥಾನದ ಪತ್ರಕರ್ತರ ಸಂಘ ಆರಂಭವಾಯಿತು. ವಿಶ್ವ ಕರ್ನಾಟಕ ಪತ್ರಿಕೆಯ ಸಂಪಾದಕರಾದ ತಿರುಮಲೆ ತಾತಾಚಾರ್ಯ ಶರ್ಮರು ಆ ಸಂಸ್ಥೆಯ ಪ್ರಥಮ ಕಾರ್ಯದರ್ಶಿ. ಈ ಸಂಘಕ್ಕೆ ಘಟಾನುಘಟಿಗಳು ಅಧ್ಯಕ್ಷರಾಗಿದ್ದರು. ಈ ಸಂಘ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘವಾಗಿ ಮಾರ್ಪಟ್ಟ ಮೇಲೂ ಪೋತನ್ ಜೋಸೆಫ್, ಸೀತಾರಾಮ ಶಾಸ್ತ್ರಿ, ಜಯಶೀಲರಾವ್, ಗಂಗಾಧರ ಮೊದಲಿಯಾರ್, ಕೆ.ಎಂ.ನಾಗರಾಜ್ ಮುಂತಾದ ಖ್ಯಾತ ಪತ್ರಿಕೋದ್ಯಮಿಗಳು ಸಂಘದ ಅಧ್ಯಕ್ಷರಾಗಿದ್ದು ಸಂಘವನ್ನು ಉಜ್ಛ್ರಾಯ ಸ್ಥಿತಿಗೆ ತಂದರು. ಆದರೆ ಕಳೆದ 4-6 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ತನ್ನ ಕೈವಶದಲ್ಲಿ ಇಟ್ಟುಕೊಂಡು ಕಾನೂನು ಕಟ್ಟಲೆಗಳನ್ನೆಲ್ಲವನ್ನೂ ಗಾಳಿಗೆ ತೂರಿ ಲಕ್ಷಾಂತರ ರೂಪಾಯಿಗಳನ್ನು ಗುಳುಂ ಮಾಡಿದ ರಾಜು ಎಂಬಾತ ಘನತೆವೆತ್ತ ಪತ್ರಕರ್ತರ ಸಂಘವನ್ನು ಅಧೋಗತಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮಧ್ಯೆ ಹಲಸೂರು ಪೋಲೀಸ್ ಠಾಣೆಗೆ 25-09-2018ರಲ್ಲಿ ಬಂಗಲೆ ಮಲ್ಲಿಕಾರ್ಜುನ ಎಂಬ ಹೆಸರಿನ ಸಂಘದ ಸದಸ್ಯರು `ಅಧ್ಯಕ್ಷರಾಗಿರುವ ರಾಜು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2013ರಿಂದ 17ರವರೆಗೆ ಮತ್ತು 2018 ರಿಂದ 2021ರವರೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಸಂಘದ ನಿಶ್ಚಿತ ಠೇವಣಿ ಹಣ ಮತ್ತು ಇತರೆ ಬಾಬ್ತು ಹಣದ ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂದು ಆರೋಪ ಮಾಡಿ ದೂರು ಸಲ್ಲಿಸಿದರು. ಈ ಆರೋಪದ ಹಿನ್ನೆಲೆಯಲ್ಲಿ ಪೋಲೀಸರು ಕೇಸ್ ನಂ.0226/2018ನ್ನು ದಾಖಲೆ ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜುರವರ ಮೇಲೆ 12/05/2004 ಚಿಕ್ಕಮಗಳೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 406/2008ರ ಅನ್ವಯ ಕ್ರಿಮಿನಲ್ ಪ್ರಕರಣ ಒಂದರಲ್ಲಿ 3 ತಿಂಗಳ ಶಿಕ್ಷೆ ಆಗಿರುವುದಾಗಿ ತಿಳಿದು ಬಂದಿದೆ. ಈ ಕಾರಣಕ್ಕಾಗಿ ರಾಜುರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಕಾರ್ಯಕಾರಣಿ ಸಮಿತಿ 5.10.2018ರಂದು ಸಭೆ ಸೇರಿ ರಾಜುರವರ ರಾಜೀನಾಮೆಯನ್ನು ಅಂಗೀಕರಿಸಿ ಶಿವಾನಂದ ತಗಡೂರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತು. ಅಲ್ಲದೇ ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ದುರ್ಬಳಕೆಯ ಬಗೆಗೆ ಲೆಕ್ಕ ಸಂಶೋಧನೆ ಮಾಡುವಂತೆ ಗುಡಿಹಳ್ಳಿ ನಾಗರಾಜ್ ಅಧ್ಯಕ್ಷತೆಯಲ್ಲಿ ಸಿ.ಕೆ.ಮಹೇಂದ್ರ, ರವಿಕುಮಾರ್, ರಮೇಶ್ ಕುಟ್ಟಪ್ಪ, ಗಣಪತಿ ಗಂಗೊಳ್ಳಿ ಮೊದಲಾದವರ ಸಮಿತಿ ರಚಿಸಿದ್ದಾರೆ. ಈ ಸಮಿತಿ ಕೂಲಂಕುಶವಾಗಿ ಲೆಕ್ಕ ಸಂಶೋಧನೆ ಮಾಡಿ ವರದಿ ಸಲ್ಲಿಸಿದೆ.
ಈ ವರದಿಯ ಸಾರಾಂಶ ಹೀಗಿದೆ. ರಾಜುರವರ ಅಧ್ಯಕ್ಷತೆಯ ಅವಧಿಯಲ್ಲಿ ಹಣಕಾಸು ಅವ್ಯವಹಾರಗಳು ನಡೆಸಿರುವುದು ಮೇಲ್ನೋಟಕ್ಕೆ ಕಂಡು¨ರುತ್ತದೆ. ಇದರಲ್ಲಿ ರಾಜುರವರ ಪಾತ್ರವು ನೇರವಾಗಿ ಕಂಡುಬರುತ್ತದೆ. ಜೊತೆಗೆ ಈ ಅವ್ಯವಹಾರಗಳಿಗೆ ಸಂಘದ ಪ್ರಧಾನ(ಧನ) ಕಾರ್ಯದರ್ಶಿ ಕೆ.ಜೆ.ಭೀಮನಗೌಡ ಹಾಗೂ ಖಜಾಂಚಿ ಕೂಡ ಜವಾಬ್ಧಾರರು ಎಂದು ಈ ವಿಚಾರಣಾ ಸಮಿತಿ ಅಭಿಪ್ರಾಯಪಟ್ಟಿದೆ. 2014-15ನೇ ಸಾಲಿನಲ್ಲಿ ಅಧ್ಯಕ್ಷ ರಾಜುರವರು ಪ್ರಯಾಣ ಭತ್ಯೆಯಾಗಿ 2,66,200 ರೂಗಳನ್ನು 2017-18ನೇ ಸಾಲಿನ ಲೆಕ್ಕಪತ್ರದಲ್ಲಿ 8,61,777 ರೂಗಳನ್ನೂ ಬಳಕೆ ಮಾಡಿಕೊಂಡಿದ್ದಾರೆ. ಈ ಮೂರು ಅವಧಿಯಲ್ಲಿ ರಾಜು ಭಾರೀ ಮೊತ್ತದ ಸಂಚಾರ ವೆಚ್ಚ ಮಾಡಿರುವುದು ಸೂಕ್ತವಲ್ಲ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.
ರಾಜು ನಿವೇಶನಕ್ಕಾಗಿ ಎಂದು ಹೇಳಿ ಬ್ಯಾಂಕುಗಳಿಂದ 26 ಲಕ್ಷ ರೂಗಳನ್ನು ತೆಗೆದಿದ್ದಾರೆ. ಸಂಘಕ್ಕೆ ನಿವೇಶನ ನೀಡಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿ ಸರ್ಕಾರ 20 ಗುಂಟೆ ಜಮೀನನ್ನು ನೀಡಲೂ ನಿರ್ಧರಿಸಿದೆ. ಆದರೆ ಈವರೆಗೆ ಸರ್ಕಾರದಿಂದ ಮಂಜೂರಾತಿ ಪತ್ರ ಸಂಘಕ್ಕೆ ಬಂದಿಲ್ಲ. ಕ್ರಯಪತ್ರ ರಿಜಿಸ್ಟಾರ್ ಆಗಿಲ್ಲ. ಸರ್ಕಾರ ಪುಕ್ಕಟ್ಟೆ ನಿವೇಶನ ಕೊಟ್ಟಿದ್ದರು ರಾಜುರವರು 26 ಲಕ್ಷ ರೂಗಳನ್ನು ನಿವೇಶನಕ್ಕಾಗಿ ಪಡೆದಿದ್ದಾರೆ. ನಿವೇಶನವನ್ನು ರಾಜು ಕೊಂಡುಕೊಂಡರೇ? ಹೇಗೆ?
ಹಾಸನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಮ್ಮೇಳನ ನಡೆಯಿತು. ಈ ಸಮ್ಮೇಳನಕ್ಕೆ ಸರ್ಕಾರ 10 ಲಕ್ಷ ರೂಪಾಯಿ ನೀಡಿತ್ತು. ಸಮ್ಮೇಳನದ ಖರ್ಚಿಗೆಂದು ಶ್ರವಣಬೆಳಗೊಳದ ಜೈನಮಠ ಹಣ ನೀಡಿದೆ. ಹೀಗಿದ್ದರೂ ರಾಜುರವರು 11,39,949 ರೂಗಳನ್ನು ಸಂಘ ಅಧಿವೇಶನಕ್ಕೆ ಖರ್ಚು ಮಾಡಿರುವುದಾಗಿ ಲೆಕ್ಕ ಬರೆದಿದ್ದಾರೆ. ಸಂಘ ಅಧಿವೇಶನಕ್ಕಾಗಿ ಖರ್ಚು ಮಾಡಿದ ಬಗೆಗೆ ಒಂದು ವೋಚರೂ ಇಲ್ಲ ಎಂದು ತನಿಖಾ ತಂಡ ವರದಿ ಮಾಡಿದೆ. ಮೇಲ್ನೋಟಕ್ಕೆ ಹಣ ದುರುಪಯೋಗವಾದಂತೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಫಿಕ್ಸೆಡ್ ಡೆಪಾಸಿಟ್ ಹಣವನ್ನು ಅವಧಿ ಮುಗಿಯುವವರೆಗೂ ಬ್ಯಾಂಕಿನಿಂದ ತೆಗೆಯುವಂತಿಲ್ಲ ಆದರೆ ರಾಜುರವರು ಅನೇಕ ಠೇವಣಿ ಹಣವನ್ನು ಹಿಂತೆಗೆಯುವ ಚಾಳಿ ಬೆಳೆಸಿಕೊಂಡಿದ್ದರು.
ಹೀಗೆ ಕಾನೂನಿನ ಭಯವೂ ಇಲ್ಲದೆ ಸೆರೆಮನೆಗೆ ಹೋಗಬೇಕಾದ ಪ್ರಮೇಯ ಬರಬಹುದು ಎಂಬ ಪ್ರಜ್ಞೆಯೂ ಇಲ್ಲದೆ ಹುಂಬರಂತೆ ಸಂಘದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಶಾಸಕರಿಂದ ಶಾಸಕರ ನಿಧಿಯಲ್ಲಿ 2017-18 ಸಾಲಿನಲ್ಲಿ ಕೆ.ಜೆ.ಜಾರ್ಜ್‍ರವರು 5 ಲಕ್ಷ, ಕೆ.ಎಸ್.ಈಶ್ವರಪ್ಪನವರು 3 ಲಕ್ಷ, ವಿನಯ್ ಕುಲಕರ್ಣಿ ಒಂದು ಲಕ್ಷ, ಸಿ.ಪಿ.ಯೋಗೀಶ್ವರ್ 2.5 ಲಕ್ಷ ದೇಣಿಗೆ ನೀಡಿದ್ದಾರೆ.
ಹಲಸೂರು ಠಾಣೆಯ ಪೊಲೀಸ್ ಅಧಿಕಾರಿಗಳು ರಾಜುರವರನ್ನು ಬಂಧಿಸಿದ್ದರು. ಈಗ ರಾಜು ಹೈಕೋರ್ಟ್‍ನ ಮೊರೆ ಹೋಗಿದ್ದಾರೆ. ಸಂಘದ ಹಣ ನುಂಗಿರುವ ರಾಜುರವರಿಗೆ ಹೈಕೋರ್ಟ್‍ನಲ್ಲಿ ರಕ್ಷಣೆ ಸಿಗಬಾರದು. ಪತ್ರಕರ್ತರ ಸಂಘದಂತಹ ಘನತೆವೆತ್ತ ಸಂಸ್ಥೆಯಲ್ಲಿ ಈ ಹಗಲು ದರೋಡೆ ನಡೆದಿರುವುದು ಲಜ್ಬಾಸ್ಪದ ವಿಚಾರವಾಗಿದೆ. ಪೊಲೀಸರು ನಿಷ್ಠೆಯಿಂದ ನಡೆದುಕೊಂಡು ರಾಜುನಂತಹ ಹಗಲು ದರೋಡೆಕೋರರಿಗೆ ಪಾಠ ಕಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...