Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...