Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...