Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...