Homeಕರ್ನಾಟಕಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಬದುಕು ಸಂಸ್ಥೆಯಿಂದ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್: ಅರ್ಜಿ ಕರೆ

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇರಬೇಕೆಂಬುದು ಬದುಕು ಸಂಸ್ಥೆಯ ಉದ್ದೇಶ: ಮುರಳಿ ಮೋಹನ್‌ ಕಾಟಿ

- Advertisement -
- Advertisement -

ಬದುಕು ಸೆಂಟರ್‌ ಫಾರ್‌ ಲೈವ್ಲಿಹುಡ್ಸ್‌ ಲರ್ನಿಂಗ್ ಸಂಸ್ಥೆಯಿಂದ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ‘ಕ್ರಿಯಾಶೀಲ ಮಾಧ್ಯಮ’ ಹೆಸರಲ್ಲಿ ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ನಡೆಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ವರದಿಗಾರಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜೊತೆಗೆ ಕಿರುತೆರೆ-ಹಿರಿತೆರೆಗಳಿವೆ ಸೃಜನಶೀಲ ಸ್ಕ್ರಿಪ್ಟ್‌ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್‌ (ಪ್ರಿಂಟ್‌ ವೆಬ್‌) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿ, ಮೊಬೈಲ್ ಜರ್ನಲಿಸಂ, ವೆಬ್‌ಸೈಟ್‌, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್‌, ಆನ್‌‌ಲೈನ್‌ ಜರ್ನಲಿಸಂನ ಆಧುನಿಕ ತಂತ್ರಜ್ಞಾನ ಕೌಶಲಗಳ ತರಬೇತಿ, ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ಬರವಣಿಗೆ ಮುಂತಾದ ಕೌಶಲಗಳ ಕುರಿತು ಬೆಳಕು ಚೆಲ್ಲಲಾಗುವುದು, ಮಾಧ್ಯಮ ಸಂಸ್ಥೆಗಳು ಮತ್ತು ಮನೋರಂಜನ ಕ್ಷೇತ್ರದಲ್ಲಿ ಇಂಟರ್‌ಶಿಪ್‌, ಉದ್ಯೋಗವಕಾಶ ಕಲ್ಪಿಸಲಾಗುವುದು ಬದುಕು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪತ್ರಿಕೆ, ಸುದ್ದಿವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಬಯಸುವವರಿಗೆ ಈ ಕೋರ್ಸ್ ನಡೆಸಲಾಗುತ್ತಿದೆ. ಹೀಗಾಗಲೇ ಯುವತಿಯರ ಪ್ರವೇಶಾತಿ ನಡೆದಿರುವುದರಿಂದ ಕೆಲವೇ ಕೆಲವು ಯುವತಿಯರಿಗೆ ಮಾತ್ರ ಸೀಟುಗಳು ಲಭ್ಯವಿದೆ. ಅಭ್ಯರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗೆ ಅನುಗುಣವಾಗಿ ತರಬೇತಿ ಶುಲ್ಕ, ಸೂಕ್ತ ಅಭ್ಯರ್ಥಿಗಳಿಗೆ ವಿಶೇಷ ಸ್ಕಾಲರ್‌ಶಿಪ್, ಫೆಲೋಶಿಪ್‌ಗಳಿಗೆ ಅವಕಾಶವಿದೆ. ಅಗತ್ಯವಿರುವವರಿಗೆ ಉಚಿತ ವಸತಿ ಸೌಕರ್ಯ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇಂಗ್ಲಿಷ್‌ ಕಲಿಕೆ-ಬಳಕೆಯೊಂದಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಇರಲಿದೆ. ಗೂಗಲ್‌ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಲು https://forms.gle/NmSpEjkQFpiY998ZA ಲಿಂಕ್‌‌ ಬಳಸಬಹುದು. ಸ್ವವಿವರ ಹಾಗೂ ಅರ್ಜಿಯನ್ನು [email protected]ಗೆ ಇಮೇಲ್‌ ಮಾಡಬಹುದು. ಕಚೇರಿ ವಿಳಾಸ: ಬದುಕು- ಎ ಸೆಂಟರ್‌ ಫಾರ್‌ ಲಿವ್ಲಿಹುಡ್ಸ್‌‌ ಲರ್ನಿಂಗ್ಸ್‌ #136/7, 2ನೇ ಅಡ್ಡರಸ್ತೆ, ಎಲಿಫ್ಯಾಂಟ್‌ ರಸ್ತೆ, ಸೌತ್‌ ಎಂಡ್‌ ಸರ್ಕಲ್, ಲೈಬ್ರರಿ ಹಿಂಭಾಗ, 3ನೇ ಬ್ಲಾಕ್‌, ಜಯನಗರ, ಬೆಂಗಳೂರು- 560011. ಹೆಚ್ಚಿನ ವಿವರಗಳಿಗೆ 9916376954, 9945065060, 99720 89471 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 15 ಕೊನೆಯದಿನವಾಗಿದೆ ಎಂದು ತಿಳಿಸಿದೆ.

‘ನಾನುಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಬದುಕು ಸಂಸ್ಥೆಯ ಪ್ರೋಗ್ರಾಮ್‌ ಕನ್ವಿನರ್‌ ಮುರಳಿ ಮೋಹನ್‌ ಕಾಟಿ, “ಸಮಾಜದಲ್ಲಿ ಪರಿಣಾಮ ಬೀರುವಂತಹ ಕೋರ್ಸ್‌‌ಗಳಲ್ಲಿ ಎಲ್ಲರನ್ನೂ ಒಳಗೊಳ್ಳುವ ಸ್ಥಿತಿ ಇಲ್ಲವಾಗಿದೆ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಅಂಚಿನಲ್ಲಿರುವವರು ಈ ಕ್ಷೇತ್ರಗಳಲ್ಲಿ ಇಲ್ಲ. ಅವರು ಕೂಡ ಈ ಕ್ಷೇತ್ರಗಳಲ್ಲಿ ಕಾಲಿಟ್ಟರೆ ಪರಿಣಾಮ ಬೇರೆಯದ್ದೇ ಆಗಿರುತ್ತದೆ ಎಂಬುದು ಬದುಕು ಸಂಸ್ಥೆಯ ಉದ್ದೇಶವಾಗಿತ್ತು. ಕಳೆದ ಹನ್ನೆರಡು ವರ್ಷಗಳಿಂದ ಬದುಕು ಸಂಸ್ಥೆಯು ಕೆಲಸ ಮಾಡುತ್ತಿದೆ” ಎಂದು ಹೇಳಿದರು.

“ಪತ್ರಿಕೋದ್ಯಮ, ಆಪ್ತಸಮಾಲೋಚನೆ, ವೃತ್ತಿಪರ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣೆ, ಸುಸ್ಥಿರ ಕೃಷಿ, ಫಿಲ್ಮ್‌ ಮೇಕಿಂಗ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದೆ. ಪ್ರತಿವರ್ಷ ಪ್ರತಿ ಕೋರ್ಸ್‌ಗೆ ಇಪ್ಪತ್ತು ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತೇವೆ. ಕೃಷಿ ಸಂಬಂಧಿತ ಕೋರ್ಸ್ ತರಗತಿಗೆ ಸೀಮಿತವಾಗಿರುವುದಿಲ್ಲ. ತರಗತಿ ಕಲಿಕೆ ತುಂಬಾ ಕಡಿಮೆ ಇರುತ್ತದೆ. ರೈತರ ಹೊಲಗಳೇ ಕಲಿಕಾ ಕೇಂದ್ರಗಳಾಗಿರುತ್ತವೆ. ಯಶಸ್ವಿಯಾಗಿ ಸುಸ್ಥಿರ ಕೃಷಿ ಮಾಡುತ್ತಿರುವವರಲ್ಲಿಗೆ ಹೋಗಿ ಕಲಿಯಲಾಗುತ್ತದೆ. ಉಳಿದ ತರಗತಿಗಳು ತರಗತಿಯಲ್ಲಿ ನಡೆಯುತ್ತವೆ. ಊಟ, ವಸತಿ ಉಚಿತವಾಗಿ ನೀಡುತ್ತೇವೆ. ಕೋರ್ಸ್ ಶುಲ್ಕವು ಕೂಡ ಕಡಿಮೆ ಇರುತ್ತದೆ. ಅದರಲ್ಲೂ ತುಂಬಾ ಆರ್ಥಿಕವಾಗಿ ಹಿಂದುಳಿದ ಶೇ. 25 ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುತ್ತೇವೆ” ಎಂದರು.

“ನಾಲ್ಕು ತರಗತಿ ಕೊಠಡಿಗಳಿರುವ ತರಬೇತಿ ಕೇಂದ್ರ ಕಟ್ಟಿದ್ದೇವೆ. ಸ್ಥಳಾವಕಾಶದ ಕೊರತೆಯಿಂದಾಗಿ ಮೊದಲೆಲ್ಲ ಒಂದು ಕೋರ್ಸ್ ಮುಗಿದ ಬಳಿಕ ಮತ್ತೊಂದು ಕೋರ್ಸ್ ನಡೆಸುತ್ತಿದ್ದೆವು. ಈಗ ನಾಲ್ಕು ಕೋರ್ಸ್ ಒಟ್ಟಿಗೆ ನಡೆಯಲಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿರಿ: ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...