Homeಚಳವಳಿಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ...

ಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ ಭಾರೀ ಖಂಡನೆ

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ಓದಿದ ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ.

- Advertisement -
- Advertisement -

ಕವಿ ಮತ್ತು ಪತ್ರಕರ್ತ ಸಿರಾಜ್‌ ಬಿಸ್ರಳ್ಳಿಯವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಕ್ರಮವನ್ನು ನೂರಾರು ಜನರು ಖಂಡಿಸಿದ್ದಾರೆ. ಅಲ್ಲದೇ ಅವರು ಬರೆದ ಕವನವೂ ಈಗಾಗಲೇ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಅನುವಾದವಾಗಿದ್ದು ವೈರಲ್‌ ಆಗಿದೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದು, ಗಂಗಾವತಿ ಪೊಲೀಸರು ದೂರು ಸಹ ದಾಖಲಿಸಿದ್ದಾರೆ. ಇದರ ವಿರುದ್ಧ ನಾಡಿನ ಕವಿಗಳು, ಸಾಹಿತಿಗಳು, ಜನಪರ ಹೋರಾಟಗಾರರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನಿನ್ನ ದಾಖಲೆ ಯಾವಾಗ ನೀಡುತ್ತಿ?..( ಆನೆಗೊಂದಿ ಉತ್ಸವದ ಕವಿಗೋಷ್ಠಿಯಲ್ಲಿ ವಾಚನ ಮಾಡಿದ ಕವಿತೆ)ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿಥಂಬಿನ, ಸರ್ವರಿನ ಮಂಗನಾಟದಲ್ಲಿಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ? ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ ,ಹೆಸರೂ ಬೇಡವೆಂದು ಹುತಾತ್ಮರಾದವರ ಇತಿಹಾಸದ ಹಾಳೆಗಳ ಹರಿಯುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ ? ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವಗೊಬೆಲ್ ಸಂತತಿಯವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಪಕೋಡ ಮಾರಿ ಬದುಕಿದವನುಚಾ ಮಾರಿ ಬದುಕಿದವನು ನನ್ನೂರಿನಲ್ಲಿಮನುಷ್ಯತ್ವ ಮಾರಿಕೊಂಡಿಲ್ಲಸ್ವಾಭಿಮಾನ ಮಾರಿಕೊಂಡಿಲ್ಲ, ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲನೀನು ದೇಶವನ್ನೇ ಮಾರಿಬಿಟ್ಟೆಯಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ದೇಶವನ್ನೇ ಯಾಮಾರಿಸಿದ ನಿನಗೆನಕಲಿ ದಾಖಲೆಗಳು ದೊಡ್ಡದಲ್ಲ ಬಿಡುಕನಿಷ್ಠ ಮನುಷ್ಯತ್ವವೂ ನಿನಗಿದೆಎನ್ನುವ ದಾಖಲೆ ಯಾವಾಗ ನೀಡುತ್ತಿ ?

Posted by Siraj Bisaralli on Tuesday, January 14, 2020

ಕೇಸು ಹಾಕುವುದಾದರೆ ನಮ್ಮ ಮೇಲೆಯೂ ಕೇಸು ಹಾಕಿ ಎಂದು ಸವಾಲು ಹಾಕಿರುವ ಜಾಲತಾಣಿಗರು ಅದೇ ಕವನವನ್ನು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಷೇರ್‌ ಮಾಡಿ ವೈರಲ್‌ ಮಾಡಿದ್ದಾರೆ. ಆ ಮೂಲಕ ಸಿರಾಜ್‌ ಬಿಸ್ರಳ್ಳಿಯವರಿಗೆ ನೈತಿಕ ಬೆಂಬಲ ನೀಡಿದ್ದಾರೆ.

ಈ ಕವನವನ್ನು ದೇಶದ್ರೋಹ ಎಂದು ಕರೆಯುವುದಾದರೆ ಶೇ.90% ಕಥೆ, ಕವನಗಳು ದೇಶದ್ರೋಹದ ಪಟ್ಟಿಗೆ ಸೇರುತ್ತವೆ. ಈ ಕವನವನ್ನು ಸಂಕುಚಿತವಾಗಿ ಅರ್ಥೈಸಿಕೊಂಡಿರುವ ಬಿಜೆಪಿ ಮತ್ತು ಪೊಲೀಸರ ಮನಸ್ಥಿತಿ ಖಂಡನೀಯ ಎಂದು ದೂರಿದ್ದಾರೆ. ಕವಿ ಚಿದಂಬರ ನರೇಂದ್ರರವರು ಗೃಹ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಅದರ ಪೂರ್ಣ ಪಾಠ ಕೆಳಗಿನಂತಿದೆ.

ಮಾನ್ಯ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿಯವರೇ,

ಎಂ.ಎನ್. ರಾಯ್ ರಂಥ ಧೀಮಂತ ನಾಯಕನ ಶಿಷ್ಯರಾದ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿಗಳಾದ ಸೋಮಪ್ಪ ರಾಯಪ್ಪ ಬೊಮ್ಮಾಯಿ ಅವರ ಸುಪುತ್ರರಾದ ತಮ್ಮ ಅಧಿಕಾರಾವಧಿಯಲ್ಲಿ ಇಂತಹ ಅನ್ಯಾಯಗಳು ಜರುಗುವುದು ನಮ್ಮ ಸಂವಿಧಾನಕ್ಕೂ, ತಾವು ನಂಬಿಕೊಂಡಿರುವ ಬಸವ ತತ್ವಕ್ಕೂ ಮತ್ತು ಸ್ವತಃ ತಮ್ಮ ತೀರ್ಥರೂಪರ ಘನ ವ್ಯಕ್ತಿತ್ವಕ್ಕೂ ಅಪಮಾನವೆಂದು ತಿಳಿದು, ಈ ಮನವಿ ಸಲ್ಲಿಸುತ್ತಿದ್ದೇನೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದಾರೆ. ಈ ದೇಶದ ಸಂವಿಧಾನದ ಕಲಂ 14 ರ ಸಮಾನತೆಯ ಆಶಯಕ್ಕೆ ವಿರುದ್ಧವಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವಾಸಿಯಾಗಿ ತನ್ನ ವಿರೋಧವನ್ನು ಅಭಿವ್ಯಕ್ತಿಸಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿಯ ಕೊಪ್ಪಳ ನಗರ ಘಟಕವು ಜನವರಿ 15 ರಂದು ಕೊಪ್ಪಳದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಕೇಂದ್ರ ಸರಕಾರದ ಯೋಜನೆ, ಪ್ರಧಾನಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹಿಂಧೂ ಧರ್ಮಕ್ಕೆ ಅವಮಾನಿಸಿದ್ದಾಗಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಈ ದೂರಿನನ್ವಯ ಜಿಲ್ಲಾಧಿಕಾರಿಗಳು ಕಾರಣ ಕೇಳಿ ಕವಿಗೆ ನೋಟಿಸ್ ಜಾರಿ ಮಾಡಿರುತ್ತಾರೆ. ಕವಿಯು ಈ ನೋಟಿಸಿಗೆ ತನ್ನ ಪ್ರತಿಕ್ರಿಯೆ ನೀಡುವ ಮೊದಲೆ ಜನವರಿ 24 ರ ರಾತ್ರಿ ಗಂಗಾವತಿ ಪೋಲಿಸ್ ಸ್ಟೇಷನ್ನಿನಲ್ಲಿ ಎಫ್.ಐ.ಆರ್ ಕೂಡ ದಾಖಲಾಗಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಹಾಗಾಗಿ ನಾವುಗಳು ಖಂಡಿಸುತ್ತೇವೆ.

ಕಾವ್ಯ ಎಲ್ಲಾ ಕಾಲಕ್ಕೂ ಎದೆಯ ದನಿಯಾಗಿ ಮಾತನಾಡಿದೆ. ಯಾವುದೇ ಕವಿ ಅಥವಾ ಕವಯಿತ್ರಿ ತನ್ನ ಕಾಲದ ಒಳಗಿನ ಬಿಕ್ಕಟ್ಟುಗಳಿಂದಲೇ ಮೈಪಡೆಯುತ್ತಾರೆ. ಹೀಗೆ ಜಗತ್ತಿನ ಎಲ್ಲಾ ಬಿಕ್ಕಟ್ಟುಗಳ ಕಾಲದಲ್ಲಿಯೂ ಅಲ್ಲಿಯದೇ ಕವಿಗಳು ತಮ್ಮದೇ ನುಡಿಗಟ್ಟುಗಳಲ್ಲಿ ಕಾವ್ಯ ಕಟ್ಟಿದ್ದಾರೆ. ಇದೀಗ ಸಿಎಎ/ಎನ್.ಆರ್.ಸಿ ವಿರುದ್ಧವೂ ದೇಶವ್ಯಾಪಿ ಕಾವ್ಯ ಹುಟ್ಟಿದೆ. ಈ ನೆಲೆಯಲ್ಲಿ ಸಿರಾಜ್ ಅವರ ಕವಿತೆ ಈ ಕಾಲದ ಬಿಕ್ಕಟ್ಟುಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಪ್ರಶ್ನಿಸಿದ್ದಾರೆ. ಅಲ್ಲಿ ಯಾವುದೇ ಪಕ್ಷ, ನಿರ್ದಿಷ್ಠ ವ್ಯಕ್ತಿ ಎನ್ನುವುದಕ್ಕಿಂತ ಇದು ಸಾಂಕೇತಿಕವಾಗಿದೆ.

ಪ್ರಜಾಪ್ರಭುತ್ವದ ಸರಕಾರದಲ್ಲಿ ಕವಿಯೊಬ್ಬ ತನ್ನ ಆಳುವ ಸರಕಾರದ ನೀತಿಗಳನ್ನೂ, ಆಳುವ ಪ್ರಭುವನ್ನು ಪ್ರಶ್ನಿಸುವುದು ಸಂವಿಧಾನಿಕ ಹಕ್ಕು. ಅಂತೆಯೇ ಪ್ರಜಾಪ್ರಭುತ್ವದ ಸೌಂದರ್ಯ. ಹಾಗಾಗಿ ಸಿರಾಜ್ ಅವರ ಕವಿತೆ ದೇಶದ ನಾಗರೀಕರು ಕೇಳುವ ಪ್ರಶ್ನೆಯನ್ನು ಪ್ರಾತಿನಿಧಿಕವಾಗಿ ಕೇಳಿದ್ದಾರೆ. ಇದೊಂದು ಸಮೂಹದ ಪ್ರಶ್ನೆ. ಈ ಕೇಸ್ ದಾಖಲಿಸುವುದಾದರೆ ಈ ದೇಶದ ಶೇ 99% ಪ್ರಜಾಪ್ರಭುತ್ವವಾದಿಗಳ ವಿರುದ್ಧ ದಾಖಲಿಸಿಕೊಳ್ಳಬೇಕಿದೆ. ಕವಿತೆಯನ್ನು ವಾಚ್ಯವಾಗಿ ಅರ್ಥಮಾಡಿಕೊಂಡು ದೂರು ದಾಖಲಿಸಿದ ಕ್ರಮವನ್ನು ನಾನು ಖಂಡಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರದ ವಿರುದ್ಧದ ದುರುದ್ದೇಶಪೂರಿತ ದೂರನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇನೆ.

ಎಂಬ ಪತ್ರವೂ ಸಹ ವೈರಲ್‌ ಆಗಿದ್ದು ನೂರಾರು ಜನ ಅದನ್ನು ಖಂಡಿಸಿ ಸಹಿ ಮಾಡಿದ್ದಾರೆ. ಅವರಲ್ಲಿ ವಿಜಯಮ್ಮ ಸುಕನ್ಯಾ ಮಾರುತಿ ವಸುಂಧರಾ ಭೂಪತಿ ಎಲ್.ಸಿ.ಸುಮಿತ್ರ ಕೆ.ಶರೀಫಾ ಎಮ್.ಎಸ್.ಆಶಾದೇವಿ ಕೆ.ನೀಲಾ ಮೀನಾಕ್ಷಿ ಬಾಳಿ ಪಿ.ಭಾರತೀದೇವಿ ಎಸ್.ಜಿ.ಸಿದ್ಧರಾಮಯ್ಯ ದಿನೇಶ್ ಅಮಿನಮಟ್ಟು ಎನ್.ಎಸ್.ಶಂಕರ ಪುರುಷೋತ್ತಮ ಬಿಳಿಮಲೆ ಪಿಚ್ಚಳ್ಳಿ ಶ್ರೀನಿವಾಸ ಬಸವರಾಜು ಅನಂತ ನಾಯಕ ಬಿ.ಶ್ರೀನಿವಾಸ ಹಸನ್ ನಯೀಂ ಸುರಕೋಡ ಬಿ.ಪೀರಬಾಷ ಎ.ಎಸ್.ಪ್ರಭಾಕರ ಶಶಿ ಸಂಪಳ್ಳಿ ಎಂ.ಡಿ.ಒಕ್ಕುಂದ ಪ್ರಭು ಖಾನಾಪುರೆ ಆರ್.ಕೆ.ಹುಡುಗಿ ವಡ್ಡಗೆರೆ ನಾಗರಾಜಯ್ಯ ಬಿ.ಶ್ರೀಪಾದ ಭಟ್ ಆರಿಫ್ ರಾಜಾ ರಝಾಕ್ ಉಸ್ತಾದ್ ಅಕ್ಷತಾ ಹುಂಚದಕಟ್ಟೆ ಅರುಣ್ ಜೋಳದಕೂಡ್ಲಿಗಿ, ಬಿ.ಸುರೇಶ್, ಕೆ.ಫಣಿರಾಜ್ ಪ್ರಮುಖರಾಗಿದ್ದಾರೆ.

ವರಕವಿ ದ.ರಾ.ಬೇಂದ್ರೆಯವರು ಸ್ವಾತಂತ್ರ್ಯಪೂರ್ವದಲ್ಲಿ ‘ನರಬಲಿ’ ಎಂಬ ಕವಿತೆ ರಚಿಸಿದ್ದರು. ಕವಿತೆಯಲ್ಲಿ ಮಹಾಕಾಳಿಯ ರೂಪಕವನ್ನು ಬಳಸಿ, ಬ್ರಿಟಿಷರ ದಬ್ಬಾಳಿಕೆಯನ್ನು ವರ್ಣಿಸಿದ್ದರು. ಭಾರತೀಯರು ತಮ್ಮನ್ನು ತಾವು ‘ನರಬಲಿ’ ಕೊಟ್ಟುಕೊಂಡಾದರೂ ಸ್ವಾತಂತ್ರ್ಯ ಪಡೆಯಬೇಕು ಎಂಬುದು ಕವಿತೆಯ ಆಶಯವಾಗಿತ್ತು. ಸಹಜವಾಗಿಯೇ ಪ್ರಭುತ್ವ ಸಹಿಸಲಿಲ್ಲ. ಬೇಂದ್ರೆಯವರನ್ನು ಪೊಲೀಸರು ಕರೆದೊಯ್ದರು. ಹಿಂಡಲಗಿ ಜೈಲಿನಲ್ಲಿ ಬೇಂದ್ರೆ ಮೂರು ತಿಂಗಳ ಶಿಕ್ಷೆ ಅನುಭವಿಸಿದರು. ಅದಾದಮೇಲೂ ಕ್ಷಮಾಪಣೆ ಕೇಳಲು (ಮುಚ್ಚಳಿಕೆ) ಒಪ್ಪದೆ ನಜರ್ ಬಂದಿ ಶಿಕ್ಷೆಗೆ ಒಳಗಾದರು. ಬ್ರಿಟಿಷರು ಕವಿತೆಗೆ ಹೆದರಿದರು, ಈಗ ನಮ್ಮನ್ನಾಳುವವರೂ ಬೆದರುತ್ತಿದ್ದಾರೆ. ಹೇಡಿಗಳಿಗೆ ಬಣ್ಣದ ಹಂಗೆಲ್ಲಿ? ಎಂದು ಪತ್ರಕರ್ತ ದಿನೇಶ್‌ ಕುಮಾರ್‌ ದಿನೂರವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...