Homeಚಳವಳಿಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ...

ಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ ಭಾರೀ ಖಂಡನೆ

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ಓದಿದ ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ.

- Advertisement -
- Advertisement -

ಕವಿ ಮತ್ತು ಪತ್ರಕರ್ತ ಸಿರಾಜ್‌ ಬಿಸ್ರಳ್ಳಿಯವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಕ್ರಮವನ್ನು ನೂರಾರು ಜನರು ಖಂಡಿಸಿದ್ದಾರೆ. ಅಲ್ಲದೇ ಅವರು ಬರೆದ ಕವನವೂ ಈಗಾಗಲೇ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಅನುವಾದವಾಗಿದ್ದು ವೈರಲ್‌ ಆಗಿದೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದು, ಗಂಗಾವತಿ ಪೊಲೀಸರು ದೂರು ಸಹ ದಾಖಲಿಸಿದ್ದಾರೆ. ಇದರ ವಿರುದ್ಧ ನಾಡಿನ ಕವಿಗಳು, ಸಾಹಿತಿಗಳು, ಜನಪರ ಹೋರಾಟಗಾರರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನಿನ್ನ ದಾಖಲೆ ಯಾವಾಗ ನೀಡುತ್ತಿ?..( ಆನೆಗೊಂದಿ ಉತ್ಸವದ ಕವಿಗೋಷ್ಠಿಯಲ್ಲಿ ವಾಚನ ಮಾಡಿದ ಕವಿತೆ)ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿಥಂಬಿನ, ಸರ್ವರಿನ ಮಂಗನಾಟದಲ್ಲಿಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ? ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ ,ಹೆಸರೂ ಬೇಡವೆಂದು ಹುತಾತ್ಮರಾದವರ ಇತಿಹಾಸದ ಹಾಳೆಗಳ ಹರಿಯುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ ? ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವಗೊಬೆಲ್ ಸಂತತಿಯವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಪಕೋಡ ಮಾರಿ ಬದುಕಿದವನುಚಾ ಮಾರಿ ಬದುಕಿದವನು ನನ್ನೂರಿನಲ್ಲಿಮನುಷ್ಯತ್ವ ಮಾರಿಕೊಂಡಿಲ್ಲಸ್ವಾಭಿಮಾನ ಮಾರಿಕೊಂಡಿಲ್ಲ, ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲನೀನು ದೇಶವನ್ನೇ ಮಾರಿಬಿಟ್ಟೆಯಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ದೇಶವನ್ನೇ ಯಾಮಾರಿಸಿದ ನಿನಗೆನಕಲಿ ದಾಖಲೆಗಳು ದೊಡ್ಡದಲ್ಲ ಬಿಡುಕನಿಷ್ಠ ಮನುಷ್ಯತ್ವವೂ ನಿನಗಿದೆಎನ್ನುವ ದಾಖಲೆ ಯಾವಾಗ ನೀಡುತ್ತಿ ?

Posted by Siraj Bisaralli on Tuesday, January 14, 2020

ಕೇಸು ಹಾಕುವುದಾದರೆ ನಮ್ಮ ಮೇಲೆಯೂ ಕೇಸು ಹಾಕಿ ಎಂದು ಸವಾಲು ಹಾಕಿರುವ ಜಾಲತಾಣಿಗರು ಅದೇ ಕವನವನ್ನು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಷೇರ್‌ ಮಾಡಿ ವೈರಲ್‌ ಮಾಡಿದ್ದಾರೆ. ಆ ಮೂಲಕ ಸಿರಾಜ್‌ ಬಿಸ್ರಳ್ಳಿಯವರಿಗೆ ನೈತಿಕ ಬೆಂಬಲ ನೀಡಿದ್ದಾರೆ.

ಈ ಕವನವನ್ನು ದೇಶದ್ರೋಹ ಎಂದು ಕರೆಯುವುದಾದರೆ ಶೇ.90% ಕಥೆ, ಕವನಗಳು ದೇಶದ್ರೋಹದ ಪಟ್ಟಿಗೆ ಸೇರುತ್ತವೆ. ಈ ಕವನವನ್ನು ಸಂಕುಚಿತವಾಗಿ ಅರ್ಥೈಸಿಕೊಂಡಿರುವ ಬಿಜೆಪಿ ಮತ್ತು ಪೊಲೀಸರ ಮನಸ್ಥಿತಿ ಖಂಡನೀಯ ಎಂದು ದೂರಿದ್ದಾರೆ. ಕವಿ ಚಿದಂಬರ ನರೇಂದ್ರರವರು ಗೃಹ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಅದರ ಪೂರ್ಣ ಪಾಠ ಕೆಳಗಿನಂತಿದೆ.

ಮಾನ್ಯ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿಯವರೇ,

ಎಂ.ಎನ್. ರಾಯ್ ರಂಥ ಧೀಮಂತ ನಾಯಕನ ಶಿಷ್ಯರಾದ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿಗಳಾದ ಸೋಮಪ್ಪ ರಾಯಪ್ಪ ಬೊಮ್ಮಾಯಿ ಅವರ ಸುಪುತ್ರರಾದ ತಮ್ಮ ಅಧಿಕಾರಾವಧಿಯಲ್ಲಿ ಇಂತಹ ಅನ್ಯಾಯಗಳು ಜರುಗುವುದು ನಮ್ಮ ಸಂವಿಧಾನಕ್ಕೂ, ತಾವು ನಂಬಿಕೊಂಡಿರುವ ಬಸವ ತತ್ವಕ್ಕೂ ಮತ್ತು ಸ್ವತಃ ತಮ್ಮ ತೀರ್ಥರೂಪರ ಘನ ವ್ಯಕ್ತಿತ್ವಕ್ಕೂ ಅಪಮಾನವೆಂದು ತಿಳಿದು, ಈ ಮನವಿ ಸಲ್ಲಿಸುತ್ತಿದ್ದೇನೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದಾರೆ. ಈ ದೇಶದ ಸಂವಿಧಾನದ ಕಲಂ 14 ರ ಸಮಾನತೆಯ ಆಶಯಕ್ಕೆ ವಿರುದ್ಧವಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವಾಸಿಯಾಗಿ ತನ್ನ ವಿರೋಧವನ್ನು ಅಭಿವ್ಯಕ್ತಿಸಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿಯ ಕೊಪ್ಪಳ ನಗರ ಘಟಕವು ಜನವರಿ 15 ರಂದು ಕೊಪ್ಪಳದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಕೇಂದ್ರ ಸರಕಾರದ ಯೋಜನೆ, ಪ್ರಧಾನಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹಿಂಧೂ ಧರ್ಮಕ್ಕೆ ಅವಮಾನಿಸಿದ್ದಾಗಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಈ ದೂರಿನನ್ವಯ ಜಿಲ್ಲಾಧಿಕಾರಿಗಳು ಕಾರಣ ಕೇಳಿ ಕವಿಗೆ ನೋಟಿಸ್ ಜಾರಿ ಮಾಡಿರುತ್ತಾರೆ. ಕವಿಯು ಈ ನೋಟಿಸಿಗೆ ತನ್ನ ಪ್ರತಿಕ್ರಿಯೆ ನೀಡುವ ಮೊದಲೆ ಜನವರಿ 24 ರ ರಾತ್ರಿ ಗಂಗಾವತಿ ಪೋಲಿಸ್ ಸ್ಟೇಷನ್ನಿನಲ್ಲಿ ಎಫ್.ಐ.ಆರ್ ಕೂಡ ದಾಖಲಾಗಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಹಾಗಾಗಿ ನಾವುಗಳು ಖಂಡಿಸುತ್ತೇವೆ.

ಕಾವ್ಯ ಎಲ್ಲಾ ಕಾಲಕ್ಕೂ ಎದೆಯ ದನಿಯಾಗಿ ಮಾತನಾಡಿದೆ. ಯಾವುದೇ ಕವಿ ಅಥವಾ ಕವಯಿತ್ರಿ ತನ್ನ ಕಾಲದ ಒಳಗಿನ ಬಿಕ್ಕಟ್ಟುಗಳಿಂದಲೇ ಮೈಪಡೆಯುತ್ತಾರೆ. ಹೀಗೆ ಜಗತ್ತಿನ ಎಲ್ಲಾ ಬಿಕ್ಕಟ್ಟುಗಳ ಕಾಲದಲ್ಲಿಯೂ ಅಲ್ಲಿಯದೇ ಕವಿಗಳು ತಮ್ಮದೇ ನುಡಿಗಟ್ಟುಗಳಲ್ಲಿ ಕಾವ್ಯ ಕಟ್ಟಿದ್ದಾರೆ. ಇದೀಗ ಸಿಎಎ/ಎನ್.ಆರ್.ಸಿ ವಿರುದ್ಧವೂ ದೇಶವ್ಯಾಪಿ ಕಾವ್ಯ ಹುಟ್ಟಿದೆ. ಈ ನೆಲೆಯಲ್ಲಿ ಸಿರಾಜ್ ಅವರ ಕವಿತೆ ಈ ಕಾಲದ ಬಿಕ್ಕಟ್ಟುಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಪ್ರಶ್ನಿಸಿದ್ದಾರೆ. ಅಲ್ಲಿ ಯಾವುದೇ ಪಕ್ಷ, ನಿರ್ದಿಷ್ಠ ವ್ಯಕ್ತಿ ಎನ್ನುವುದಕ್ಕಿಂತ ಇದು ಸಾಂಕೇತಿಕವಾಗಿದೆ.

ಪ್ರಜಾಪ್ರಭುತ್ವದ ಸರಕಾರದಲ್ಲಿ ಕವಿಯೊಬ್ಬ ತನ್ನ ಆಳುವ ಸರಕಾರದ ನೀತಿಗಳನ್ನೂ, ಆಳುವ ಪ್ರಭುವನ್ನು ಪ್ರಶ್ನಿಸುವುದು ಸಂವಿಧಾನಿಕ ಹಕ್ಕು. ಅಂತೆಯೇ ಪ್ರಜಾಪ್ರಭುತ್ವದ ಸೌಂದರ್ಯ. ಹಾಗಾಗಿ ಸಿರಾಜ್ ಅವರ ಕವಿತೆ ದೇಶದ ನಾಗರೀಕರು ಕೇಳುವ ಪ್ರಶ್ನೆಯನ್ನು ಪ್ರಾತಿನಿಧಿಕವಾಗಿ ಕೇಳಿದ್ದಾರೆ. ಇದೊಂದು ಸಮೂಹದ ಪ್ರಶ್ನೆ. ಈ ಕೇಸ್ ದಾಖಲಿಸುವುದಾದರೆ ಈ ದೇಶದ ಶೇ 99% ಪ್ರಜಾಪ್ರಭುತ್ವವಾದಿಗಳ ವಿರುದ್ಧ ದಾಖಲಿಸಿಕೊಳ್ಳಬೇಕಿದೆ. ಕವಿತೆಯನ್ನು ವಾಚ್ಯವಾಗಿ ಅರ್ಥಮಾಡಿಕೊಂಡು ದೂರು ದಾಖಲಿಸಿದ ಕ್ರಮವನ್ನು ನಾನು ಖಂಡಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರದ ವಿರುದ್ಧದ ದುರುದ್ದೇಶಪೂರಿತ ದೂರನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇನೆ.

ಎಂಬ ಪತ್ರವೂ ಸಹ ವೈರಲ್‌ ಆಗಿದ್ದು ನೂರಾರು ಜನ ಅದನ್ನು ಖಂಡಿಸಿ ಸಹಿ ಮಾಡಿದ್ದಾರೆ. ಅವರಲ್ಲಿ ವಿಜಯಮ್ಮ ಸುಕನ್ಯಾ ಮಾರುತಿ ವಸುಂಧರಾ ಭೂಪತಿ ಎಲ್.ಸಿ.ಸುಮಿತ್ರ ಕೆ.ಶರೀಫಾ ಎಮ್.ಎಸ್.ಆಶಾದೇವಿ ಕೆ.ನೀಲಾ ಮೀನಾಕ್ಷಿ ಬಾಳಿ ಪಿ.ಭಾರತೀದೇವಿ ಎಸ್.ಜಿ.ಸಿದ್ಧರಾಮಯ್ಯ ದಿನೇಶ್ ಅಮಿನಮಟ್ಟು ಎನ್.ಎಸ್.ಶಂಕರ ಪುರುಷೋತ್ತಮ ಬಿಳಿಮಲೆ ಪಿಚ್ಚಳ್ಳಿ ಶ್ರೀನಿವಾಸ ಬಸವರಾಜು ಅನಂತ ನಾಯಕ ಬಿ.ಶ್ರೀನಿವಾಸ ಹಸನ್ ನಯೀಂ ಸುರಕೋಡ ಬಿ.ಪೀರಬಾಷ ಎ.ಎಸ್.ಪ್ರಭಾಕರ ಶಶಿ ಸಂಪಳ್ಳಿ ಎಂ.ಡಿ.ಒಕ್ಕುಂದ ಪ್ರಭು ಖಾನಾಪುರೆ ಆರ್.ಕೆ.ಹುಡುಗಿ ವಡ್ಡಗೆರೆ ನಾಗರಾಜಯ್ಯ ಬಿ.ಶ್ರೀಪಾದ ಭಟ್ ಆರಿಫ್ ರಾಜಾ ರಝಾಕ್ ಉಸ್ತಾದ್ ಅಕ್ಷತಾ ಹುಂಚದಕಟ್ಟೆ ಅರುಣ್ ಜೋಳದಕೂಡ್ಲಿಗಿ, ಬಿ.ಸುರೇಶ್, ಕೆ.ಫಣಿರಾಜ್ ಪ್ರಮುಖರಾಗಿದ್ದಾರೆ.

ವರಕವಿ ದ.ರಾ.ಬೇಂದ್ರೆಯವರು ಸ್ವಾತಂತ್ರ್ಯಪೂರ್ವದಲ್ಲಿ ‘ನರಬಲಿ’ ಎಂಬ ಕವಿತೆ ರಚಿಸಿದ್ದರು. ಕವಿತೆಯಲ್ಲಿ ಮಹಾಕಾಳಿಯ ರೂಪಕವನ್ನು ಬಳಸಿ, ಬ್ರಿಟಿಷರ ದಬ್ಬಾಳಿಕೆಯನ್ನು ವರ್ಣಿಸಿದ್ದರು. ಭಾರತೀಯರು ತಮ್ಮನ್ನು ತಾವು ‘ನರಬಲಿ’ ಕೊಟ್ಟುಕೊಂಡಾದರೂ ಸ್ವಾತಂತ್ರ್ಯ ಪಡೆಯಬೇಕು ಎಂಬುದು ಕವಿತೆಯ ಆಶಯವಾಗಿತ್ತು. ಸಹಜವಾಗಿಯೇ ಪ್ರಭುತ್ವ ಸಹಿಸಲಿಲ್ಲ. ಬೇಂದ್ರೆಯವರನ್ನು ಪೊಲೀಸರು ಕರೆದೊಯ್ದರು. ಹಿಂಡಲಗಿ ಜೈಲಿನಲ್ಲಿ ಬೇಂದ್ರೆ ಮೂರು ತಿಂಗಳ ಶಿಕ್ಷೆ ಅನುಭವಿಸಿದರು. ಅದಾದಮೇಲೂ ಕ್ಷಮಾಪಣೆ ಕೇಳಲು (ಮುಚ್ಚಳಿಕೆ) ಒಪ್ಪದೆ ನಜರ್ ಬಂದಿ ಶಿಕ್ಷೆಗೆ ಒಳಗಾದರು. ಬ್ರಿಟಿಷರು ಕವಿತೆಗೆ ಹೆದರಿದರು, ಈಗ ನಮ್ಮನ್ನಾಳುವವರೂ ಬೆದರುತ್ತಿದ್ದಾರೆ. ಹೇಡಿಗಳಿಗೆ ಬಣ್ಣದ ಹಂಗೆಲ್ಲಿ? ಎಂದು ಪತ್ರಕರ್ತ ದಿನೇಶ್‌ ಕುಮಾರ್‌ ದಿನೂರವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...