Homeಚಳವಳಿಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ...

ಸಿರಾಜ್‌ ಬಿಸ್ರಳ್ಳಿಯವರ ಕವನ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಭಾಷಾಂತರ: ಕವಿಯ ವಿರುದ್ಧದ ದೂರಿಗೆ ಭಾರೀ ಖಂಡನೆ

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ಓದಿದ ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ.

- Advertisement -
- Advertisement -

ಕವಿ ಮತ್ತು ಪತ್ರಕರ್ತ ಸಿರಾಜ್‌ ಬಿಸ್ರಳ್ಳಿಯವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಕ್ರಮವನ್ನು ನೂರಾರು ಜನರು ಖಂಡಿಸಿದ್ದಾರೆ. ಅಲ್ಲದೇ ಅವರು ಬರೆದ ಕವನವೂ ಈಗಾಗಲೇ ಇಂಗ್ಲಿಷ್‌, ತೆಲುಗು ಮತ್ತು ಕೊಂಕಣಿ ಭಾಷೆಗೆ ಅನುವಾದವಾಗಿದ್ದು ವೈರಲ್‌ ಆಗಿದೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದು, ಗಂಗಾವತಿ ಪೊಲೀಸರು ದೂರು ಸಹ ದಾಖಲಿಸಿದ್ದಾರೆ. ಇದರ ವಿರುದ್ಧ ನಾಡಿನ ಕವಿಗಳು, ಸಾಹಿತಿಗಳು, ಜನಪರ ಹೋರಾಟಗಾರರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನಿನ್ನ ದಾಖಲೆ ಯಾವಾಗ ನೀಡುತ್ತಿ?..( ಆನೆಗೊಂದಿ ಉತ್ಸವದ ಕವಿಗೋಷ್ಠಿಯಲ್ಲಿ ವಾಚನ ಮಾಡಿದ ಕವಿತೆ)ಆಧಾರು, ರೇಷನ್ ಕಾರ್ಡಗಳ ಕ್ಯೂನಲ್ಲಿಥಂಬಿನ, ಸರ್ವರಿನ ಮಂಗನಾಟದಲ್ಲಿಬದುಕ ಕಳೆದುಕೊಳ್ಳು ತ್ತಿರುವವರ ದಾಖಲೆಕೇಳುವವನೇ ನಿನ್ನ ದಾಖಲೆ ಯಾವಾಗ ನೀಡುತ್ತಿ? ನಾಡಿನ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಲೇ ನೇಣಿಗೇರಿದವರ ,ಹೆಸರೂ ಬೇಡವೆಂದು ಹುತಾತ್ಮರಾದವರ ಇತಿಹಾಸದ ಹಾಳೆಗಳ ಹರಿಯುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ ? ತಾಜ್ ಮಹಲ್, ಚಾರ್ ಮಿನಾರು ಗುಂಬಜಗಳಿಗೆಕೆಂಪು ಕೋಟೆ ಕುತುಬ್ ಮಿನಾರುಗಳಿಗೆ ಸಾಕ್ಷಿ ಕೇಳುತ್ತಿರುವವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಬ್ರಿಟಿಷರ ಬೂಟು ನೆಕ್ಕಿದ ತಲೆಹಿಡುಕರಧರ್ಮ ದ್ವೇಷದ ಅಮಲಿನಲ್ಲಿ ರಕ್ತ ಕುಡಿಯುತ್ತಿರುವಗೊಬೆಲ್ ಸಂತತಿಯವನೇನಿನ್ನ ದಾಖಲೆ ಯಾವಾಗ ನೀಡುತ್ತಿ? ಪಕೋಡ ಮಾರಿ ಬದುಕಿದವನುಚಾ ಮಾರಿ ಬದುಕಿದವನು ನನ್ನೂರಿನಲ್ಲಿಮನುಷ್ಯತ್ವ ಮಾರಿಕೊಂಡಿಲ್ಲಸ್ವಾಭಿಮಾನ ಮಾರಿಕೊಂಡಿಲ್ಲ, ಸುಳ್ಳಿನ ಕಂತೆಗಳ ಕತೆ ಕಟ್ಟಿಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ಮುಳ್ಳು ಚುಚ್ಚಿ, ಹರಿದು, ಸಿಡಿದು ಹೋದಟ್ಯೂಬುಗಳ, ಟೈಯರುಗಳ ತಿದ್ದಿ ತೀಡಿ ಗಾಳಿ ತುಂಬಿದಪಂಚರ್ ನವನು ತನ್ನತನವನ್ನು ಮಾರಿಕೊಳ್ಳಲಿಲ್ಲನೀನು ದೇಶವನ್ನೇ ಮಾರಿಬಿಟ್ಟೆಯಲ್ಲಹೇಳು ನಿನ್ನ ದಾಖಲೆಗಳ ಯಾವಾಗ ನೀಡುತ್ತಿ ? ದೇಶವನ್ನೇ ಯಾಮಾರಿಸಿದ ನಿನಗೆನಕಲಿ ದಾಖಲೆಗಳು ದೊಡ್ಡದಲ್ಲ ಬಿಡುಕನಿಷ್ಠ ಮನುಷ್ಯತ್ವವೂ ನಿನಗಿದೆಎನ್ನುವ ದಾಖಲೆ ಯಾವಾಗ ನೀಡುತ್ತಿ ?

Posted by Siraj Bisaralli on Tuesday, January 14, 2020

ಕೇಸು ಹಾಕುವುದಾದರೆ ನಮ್ಮ ಮೇಲೆಯೂ ಕೇಸು ಹಾಕಿ ಎಂದು ಸವಾಲು ಹಾಕಿರುವ ಜಾಲತಾಣಿಗರು ಅದೇ ಕವನವನ್ನು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಷೇರ್‌ ಮಾಡಿ ವೈರಲ್‌ ಮಾಡಿದ್ದಾರೆ. ಆ ಮೂಲಕ ಸಿರಾಜ್‌ ಬಿಸ್ರಳ್ಳಿಯವರಿಗೆ ನೈತಿಕ ಬೆಂಬಲ ನೀಡಿದ್ದಾರೆ.

ಈ ಕವನವನ್ನು ದೇಶದ್ರೋಹ ಎಂದು ಕರೆಯುವುದಾದರೆ ಶೇ.90% ಕಥೆ, ಕವನಗಳು ದೇಶದ್ರೋಹದ ಪಟ್ಟಿಗೆ ಸೇರುತ್ತವೆ. ಈ ಕವನವನ್ನು ಸಂಕುಚಿತವಾಗಿ ಅರ್ಥೈಸಿಕೊಂಡಿರುವ ಬಿಜೆಪಿ ಮತ್ತು ಪೊಲೀಸರ ಮನಸ್ಥಿತಿ ಖಂಡನೀಯ ಎಂದು ದೂರಿದ್ದಾರೆ. ಕವಿ ಚಿದಂಬರ ನರೇಂದ್ರರವರು ಗೃಹ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಅದರ ಪೂರ್ಣ ಪಾಠ ಕೆಳಗಿನಂತಿದೆ.

ಮಾನ್ಯ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿಯವರೇ,

ಎಂ.ಎನ್. ರಾಯ್ ರಂಥ ಧೀಮಂತ ನಾಯಕನ ಶಿಷ್ಯರಾದ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿಗಳಾದ ಸೋಮಪ್ಪ ರಾಯಪ್ಪ ಬೊಮ್ಮಾಯಿ ಅವರ ಸುಪುತ್ರರಾದ ತಮ್ಮ ಅಧಿಕಾರಾವಧಿಯಲ್ಲಿ ಇಂತಹ ಅನ್ಯಾಯಗಳು ಜರುಗುವುದು ನಮ್ಮ ಸಂವಿಧಾನಕ್ಕೂ, ತಾವು ನಂಬಿಕೊಂಡಿರುವ ಬಸವ ತತ್ವಕ್ಕೂ ಮತ್ತು ಸ್ವತಃ ತಮ್ಮ ತೀರ್ಥರೂಪರ ಘನ ವ್ಯಕ್ತಿತ್ವಕ್ಕೂ ಅಪಮಾನವೆಂದು ತಿಳಿದು, ಈ ಮನವಿ ಸಲ್ಲಿಸುತ್ತಿದ್ದೇನೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದಾರೆ. ಈ ದೇಶದ ಸಂವಿಧಾನದ ಕಲಂ 14 ರ ಸಮಾನತೆಯ ಆಶಯಕ್ಕೆ ವಿರುದ್ಧವಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವಾಸಿಯಾಗಿ ತನ್ನ ವಿರೋಧವನ್ನು ಅಭಿವ್ಯಕ್ತಿಸಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿಯ ಕೊಪ್ಪಳ ನಗರ ಘಟಕವು ಜನವರಿ 15 ರಂದು ಕೊಪ್ಪಳದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಕೇಂದ್ರ ಸರಕಾರದ ಯೋಜನೆ, ಪ್ರಧಾನಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹಿಂಧೂ ಧರ್ಮಕ್ಕೆ ಅವಮಾನಿಸಿದ್ದಾಗಿ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಈ ದೂರಿನನ್ವಯ ಜಿಲ್ಲಾಧಿಕಾರಿಗಳು ಕಾರಣ ಕೇಳಿ ಕವಿಗೆ ನೋಟಿಸ್ ಜಾರಿ ಮಾಡಿರುತ್ತಾರೆ. ಕವಿಯು ಈ ನೋಟಿಸಿಗೆ ತನ್ನ ಪ್ರತಿಕ್ರಿಯೆ ನೀಡುವ ಮೊದಲೆ ಜನವರಿ 24 ರ ರಾತ್ರಿ ಗಂಗಾವತಿ ಪೋಲಿಸ್ ಸ್ಟೇಷನ್ನಿನಲ್ಲಿ ಎಫ್.ಐ.ಆರ್ ಕೂಡ ದಾಖಲಾಗಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಹಾಗಾಗಿ ನಾವುಗಳು ಖಂಡಿಸುತ್ತೇವೆ.

ಕಾವ್ಯ ಎಲ್ಲಾ ಕಾಲಕ್ಕೂ ಎದೆಯ ದನಿಯಾಗಿ ಮಾತನಾಡಿದೆ. ಯಾವುದೇ ಕವಿ ಅಥವಾ ಕವಯಿತ್ರಿ ತನ್ನ ಕಾಲದ ಒಳಗಿನ ಬಿಕ್ಕಟ್ಟುಗಳಿಂದಲೇ ಮೈಪಡೆಯುತ್ತಾರೆ. ಹೀಗೆ ಜಗತ್ತಿನ ಎಲ್ಲಾ ಬಿಕ್ಕಟ್ಟುಗಳ ಕಾಲದಲ್ಲಿಯೂ ಅಲ್ಲಿಯದೇ ಕವಿಗಳು ತಮ್ಮದೇ ನುಡಿಗಟ್ಟುಗಳಲ್ಲಿ ಕಾವ್ಯ ಕಟ್ಟಿದ್ದಾರೆ. ಇದೀಗ ಸಿಎಎ/ಎನ್.ಆರ್.ಸಿ ವಿರುದ್ಧವೂ ದೇಶವ್ಯಾಪಿ ಕಾವ್ಯ ಹುಟ್ಟಿದೆ. ಈ ನೆಲೆಯಲ್ಲಿ ಸಿರಾಜ್ ಅವರ ಕವಿತೆ ಈ ಕಾಲದ ಬಿಕ್ಕಟ್ಟುಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ಪ್ರಶ್ನಿಸಿದ್ದಾರೆ. ಅಲ್ಲಿ ಯಾವುದೇ ಪಕ್ಷ, ನಿರ್ದಿಷ್ಠ ವ್ಯಕ್ತಿ ಎನ್ನುವುದಕ್ಕಿಂತ ಇದು ಸಾಂಕೇತಿಕವಾಗಿದೆ.

ಪ್ರಜಾಪ್ರಭುತ್ವದ ಸರಕಾರದಲ್ಲಿ ಕವಿಯೊಬ್ಬ ತನ್ನ ಆಳುವ ಸರಕಾರದ ನೀತಿಗಳನ್ನೂ, ಆಳುವ ಪ್ರಭುವನ್ನು ಪ್ರಶ್ನಿಸುವುದು ಸಂವಿಧಾನಿಕ ಹಕ್ಕು. ಅಂತೆಯೇ ಪ್ರಜಾಪ್ರಭುತ್ವದ ಸೌಂದರ್ಯ. ಹಾಗಾಗಿ ಸಿರಾಜ್ ಅವರ ಕವಿತೆ ದೇಶದ ನಾಗರೀಕರು ಕೇಳುವ ಪ್ರಶ್ನೆಯನ್ನು ಪ್ರಾತಿನಿಧಿಕವಾಗಿ ಕೇಳಿದ್ದಾರೆ. ಇದೊಂದು ಸಮೂಹದ ಪ್ರಶ್ನೆ. ಈ ಕೇಸ್ ದಾಖಲಿಸುವುದಾದರೆ ಈ ದೇಶದ ಶೇ 99% ಪ್ರಜಾಪ್ರಭುತ್ವವಾದಿಗಳ ವಿರುದ್ಧ ದಾಖಲಿಸಿಕೊಳ್ಳಬೇಕಿದೆ. ಕವಿತೆಯನ್ನು ವಾಚ್ಯವಾಗಿ ಅರ್ಥಮಾಡಿಕೊಂಡು ದೂರು ದಾಖಲಿಸಿದ ಕ್ರಮವನ್ನು ನಾನು ಖಂಡಿಸುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರದ ವಿರುದ್ಧದ ದುರುದ್ದೇಶಪೂರಿತ ದೂರನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇನೆ.

ಎಂಬ ಪತ್ರವೂ ಸಹ ವೈರಲ್‌ ಆಗಿದ್ದು ನೂರಾರು ಜನ ಅದನ್ನು ಖಂಡಿಸಿ ಸಹಿ ಮಾಡಿದ್ದಾರೆ. ಅವರಲ್ಲಿ ವಿಜಯಮ್ಮ ಸುಕನ್ಯಾ ಮಾರುತಿ ವಸುಂಧರಾ ಭೂಪತಿ ಎಲ್.ಸಿ.ಸುಮಿತ್ರ ಕೆ.ಶರೀಫಾ ಎಮ್.ಎಸ್.ಆಶಾದೇವಿ ಕೆ.ನೀಲಾ ಮೀನಾಕ್ಷಿ ಬಾಳಿ ಪಿ.ಭಾರತೀದೇವಿ ಎಸ್.ಜಿ.ಸಿದ್ಧರಾಮಯ್ಯ ದಿನೇಶ್ ಅಮಿನಮಟ್ಟು ಎನ್.ಎಸ್.ಶಂಕರ ಪುರುಷೋತ್ತಮ ಬಿಳಿಮಲೆ ಪಿಚ್ಚಳ್ಳಿ ಶ್ರೀನಿವಾಸ ಬಸವರಾಜು ಅನಂತ ನಾಯಕ ಬಿ.ಶ್ರೀನಿವಾಸ ಹಸನ್ ನಯೀಂ ಸುರಕೋಡ ಬಿ.ಪೀರಬಾಷ ಎ.ಎಸ್.ಪ್ರಭಾಕರ ಶಶಿ ಸಂಪಳ್ಳಿ ಎಂ.ಡಿ.ಒಕ್ಕುಂದ ಪ್ರಭು ಖಾನಾಪುರೆ ಆರ್.ಕೆ.ಹುಡುಗಿ ವಡ್ಡಗೆರೆ ನಾಗರಾಜಯ್ಯ ಬಿ.ಶ್ರೀಪಾದ ಭಟ್ ಆರಿಫ್ ರಾಜಾ ರಝಾಕ್ ಉಸ್ತಾದ್ ಅಕ್ಷತಾ ಹುಂಚದಕಟ್ಟೆ ಅರುಣ್ ಜೋಳದಕೂಡ್ಲಿಗಿ, ಬಿ.ಸುರೇಶ್, ಕೆ.ಫಣಿರಾಜ್ ಪ್ರಮುಖರಾಗಿದ್ದಾರೆ.

ವರಕವಿ ದ.ರಾ.ಬೇಂದ್ರೆಯವರು ಸ್ವಾತಂತ್ರ್ಯಪೂರ್ವದಲ್ಲಿ ‘ನರಬಲಿ’ ಎಂಬ ಕವಿತೆ ರಚಿಸಿದ್ದರು. ಕವಿತೆಯಲ್ಲಿ ಮಹಾಕಾಳಿಯ ರೂಪಕವನ್ನು ಬಳಸಿ, ಬ್ರಿಟಿಷರ ದಬ್ಬಾಳಿಕೆಯನ್ನು ವರ್ಣಿಸಿದ್ದರು. ಭಾರತೀಯರು ತಮ್ಮನ್ನು ತಾವು ‘ನರಬಲಿ’ ಕೊಟ್ಟುಕೊಂಡಾದರೂ ಸ್ವಾತಂತ್ರ್ಯ ಪಡೆಯಬೇಕು ಎಂಬುದು ಕವಿತೆಯ ಆಶಯವಾಗಿತ್ತು. ಸಹಜವಾಗಿಯೇ ಪ್ರಭುತ್ವ ಸಹಿಸಲಿಲ್ಲ. ಬೇಂದ್ರೆಯವರನ್ನು ಪೊಲೀಸರು ಕರೆದೊಯ್ದರು. ಹಿಂಡಲಗಿ ಜೈಲಿನಲ್ಲಿ ಬೇಂದ್ರೆ ಮೂರು ತಿಂಗಳ ಶಿಕ್ಷೆ ಅನುಭವಿಸಿದರು. ಅದಾದಮೇಲೂ ಕ್ಷಮಾಪಣೆ ಕೇಳಲು (ಮುಚ್ಚಳಿಕೆ) ಒಪ್ಪದೆ ನಜರ್ ಬಂದಿ ಶಿಕ್ಷೆಗೆ ಒಳಗಾದರು. ಬ್ರಿಟಿಷರು ಕವಿತೆಗೆ ಹೆದರಿದರು, ಈಗ ನಮ್ಮನ್ನಾಳುವವರೂ ಬೆದರುತ್ತಿದ್ದಾರೆ. ಹೇಡಿಗಳಿಗೆ ಬಣ್ಣದ ಹಂಗೆಲ್ಲಿ? ಎಂದು ಪತ್ರಕರ್ತ ದಿನೇಶ್‌ ಕುಮಾರ್‌ ದಿನೂರವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...