Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...