Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...