Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...