Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...