Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...