Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...