Homeಮುಖಪುಟಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

’ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿ ಚೇತರಿಸಿಕೊಳ್ಳುತ್ತಿರಲಿಲ್ಲ’

- Advertisement -
- Advertisement -

ಆಗಸ್ಟ್ 8ರ ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದ ವಿಡಿಯೊಗಳು ವೈರಲ್ ಆದ ಬೆನ್ನಲೇ, ಯುವ ಪತ್ರಕರ್ತರೊಬ್ಬರನ್ನು ಸುತ್ತುವರೆದ ಗುಂಪೊಂದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬೆದರಿಕೆ ಹಾಕಿರುವ ವಿಡಿಯೊ ಕೂಡ ವೈರಲ್ ಆಗುತ್ತಿದೆ. ಗುಂಪಿನ ಬೆದರಿಕೆಗೆ ಜಗ್ಗದ ಪತ್ರಕರ್ತರಿಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳ ಕುರಿತು ವರದಿ ಮಾಡುವ ವೆಬ್ ಆಧಾರಿತ ಸುದ್ದಿ ಚಾನೆಲ್ ನ್ಯಾಷನಲ್ ದಸ್ತಕ್‌ನ ವರದಿಗಾರ ಅನ್ಮೋಲ್ ಪ್ರೀತಮ್ ಮೇಲೆ ದೆಹಲಿಯ ಜಂತರ್ ಮಂತರ್ ಬಳಿ ಭಾನುವಾರ ಪ್ರತಿಭಟನಾ ನಿರತರ ಗುಂಪೊಂದು ಬೆದರಿಕೆ ಹಾಕಿ, ಹಲ್ಲೆ ನಡೆಸಿದೆ.

ಈ ಕುರಿತು ವಿಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರವ ಅನ್ಮೋಲ್ ಪ್ರೀತಮ್, “ನನ್ನನ್ನು ಬೆದರಿಸುವ ಮೂಲಕ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿಸುವ ಪ್ರಯತ್ನ ನಡೆಸಲಾಯಿತು. ನಾನು ಕೂಗಲು ನಿರಾಕರಿಸಿದಾಗ, ನನ್ನನ್ನು ತಳ್ಳಲಾಯಿತು. ಈ ವಿಡಿಯೊದಲ್ಲಿ ನೀವೇ ನೋಡಿ” ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ಘಟನೆ ಕುರಿತು ಟ್ವೀಟ್ ಮಾಡಿರುವ ನ್ಯಾಷನಲ್ ದಸ್ತಕ್ ಮಾಧ್ಯಮ, “ನಕಲಿ ಹಿಂದೂ ಸಂಘಟನೆಗಳು ಬಹುಜನ ಪತ್ರಕರ್ತ ಅನ್ಮೋಲ್ ಪ್ರೀತಮ್ ಅವರನ್ನು ಬೆದರಿಸಲು ಪ್ರಯತ್ನಿಸಿದ್ದಾರೆ”. ಎಂದಿದೆ.

“ಹಿಂದೂ ಸಂಘಟನೆ ಎಂದು ಕರೆಸಿಕೊಳ್ಳುವ ಇವುಗಳು ದಲಿತ, ಒಬಿಸಿ ಸಮಾಜದಿಂದ ಬರುವ ಜನರನ್ನು ಹಿಂದುಗಳೆಂದು ಪರಿಗಣಿಸುವುದಿಲ್ಲ ಎಂಬುದು ಈ ಘಟನೆಯಿಂದ ತಿಳಿಯುತ್ತದೆ. ನ್ಯಾಷನಲ್ ದಸ್ತಕ್ ತಂಡವು ಈ ಘಟನೆಯನ್ನು ಖಂಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ವೈರಲ್ ವಿಡಿಯೊದಲ್ಲಿ ಇರುವುದು ಏನು..?

ನ್ಯಾಷನಲ್ ದಸ್ತಕ್ ಹಂಚಿಕೊಂಡ ವೀಡಿಯೊದ ಆರಂಭದಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ವರದಿಗಾರ ಪ್ರೀತಮ್‌ಗೆ ‘ಜೈ ಶ್ರೀರಾಮ್ ‘ ಎಂದು ಘೋಷಿಸಲು ಒತ್ತಾಯಿಸುತ್ತಾರೆ. ಪ್ರೀತಮ್ ನಿರಾಕರಿಸಿದಾಗ, ಆತನ ಸುತ್ತಮುತ್ತಲಿನ ಜನರ ಗುಂಪು ಅವರನ್ನು ‘ಜಿಹಾದಿ’ ಎಂದು ಕರೆಯುತ್ತದೆ.

ಇನ್ನೊಬ್ಬ ವ್ಯಕ್ತಿಯು ಪತ್ರಕರ್ತನಿಗೆ ಬಾಯಿಯಲ್ಲಿ ಮೊಸರು ಹೆಪ್ಪುಗಟ್ಟಿದೆಯೇ ಎಂದು ಛೇಡಿಸುತ್ತಾನೆ. ಮತ್ತೊಬ್ಬ “ಒಂದೋ ದೇಶವನ್ನು ತೊರೆಯಿರಿ … ನೀವು ಉಳಿಯಲು ಬಯಸಿದರೆ, ನೀವು ಜೈ ಶ್ರೀರಾಮ್ ಎಂದು ಹೇಳಬೇಕು” ಎಂದು ಪ್ರೀತಮ್‌ಗೆ ಬೆದರಿಕೆ ಹಾಕುವುದನ್ನು ವಿಡಿಯೊದಲ್ಲಿ ನೋಡಬಹುದು.

ಇವರ ಬೆದರಿಕೆಗಳಿಗೆ ಜಗ್ಗದ ವರದಿಗಾರ, “ನಾನು ಜೈ ಶ್ರೀರಾಮ್ ಹೇಳಲು ಬಯಸಿದರೆ ನಾನು ಹೇಳುತ್ತೇನೆ. ಅದನ್ನು ಹೇಳಲು ನನ್ನ ಮೇಲೆ ಒತ್ತಡ ಹಾಕಬೇಡಿ. ನಿಮ್ಮಲ್ಲಿ ಅನೇಕರು ನನ್ನನ್ನು ಹೀಗೆ ಸುತ್ತುವರೆದು ‘ಜೈ ಶ್ರೀ ರಾಮ್’ ಎಂದು ಹೇಳಲು ಒತ್ತಾಯಿಸಿದರೇ, ನಾನು ಅದನ್ನು ಹೇಳುವುದಿಲ್ಲ” ಎಂದು ಹೇಳುತ್ತಾರೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಪ್ರತಿಭಟನೆಯಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಮತ್ತೆ ಟ್ವೀಟ್ ಮಾಡಿರುವ ಪತ್ರಕರ್ತ ಅನ್ಮೋಲ್ ಪ್ರೀತಮ್, ಹೆದರಿಕೆಯಿಲ್ಲ, ಹೆದರುವುದು ಇಲ್ಲ. ಬದುಕಿರುವವರೆಗೂ ಹೋರಾಡುತ್ತೇವೆ” ಎಂದಿದ್ದಾರೆ.

“ಅವರು ನನ್ನನ್ನು ಹೊಡೆದಿದ್ದರೇ, ದೈಹಿಕ ಗಾಯಗಳು ಚೇತರಿಸಿಕೊಳ್ಳುತ್ತಿದ್ದವು. ಆದರೆ ನಾನು ನನ್ನ ನೈತಿಕತೆಯ ಮೇಲೆ ರಾಜಿ ಮಾಡಿಕೊಂಡಿದ್ದರೆ, ನನ್ನ ಆತ್ಮಸಾಕ್ಷಿಯು ಚೇತರಿಸಿಕೊಳ್ಳಲು ಎಂದಿಗೂ ಸಾಧ್ಯವಾಗುತ್ತಿರಲಿಲ್ಲ” ಎಂದು ಅವರು ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪತ್ರಕರ್ತ ಅನ್ಮೋಲ್ ಪ್ರೀತಮ್‌ಗೆ ಸಾವಿವಾರು ಮಂದಿ ಬೆಂಬಲ ನೀಡಿದ್ದಾರೆ. ಅವರ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. #ISupportAnmol ಹ್ಯಾಶ್‌ಟ್ಯಾಗ್ ಟ್ರೇಂಡ್ ಮಾಡಲಾಗಿದೆ. ಬಹುಜನ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...