Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...