Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...