Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...