Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...