Homeಮುಖಪುಟರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

- Advertisement -
- Advertisement -

ರೈಲ್ವೇ ಸಂರಕ್ಷಣಾ ಪಡೆಯ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ಎನ್ನುವವರು ಮೂವರು ಮುಸ್ಲಿಂ ಪ್ರಯಾಣಿಕರ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಪತ್ರಕರ್ತೆ ರಾಣಾ ಅಯ್ಯೂಬ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಾಡಿದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರದ ಬೇಡಿಕೆಯ ಮೇರೆಗೆ ತೆಗೆದುಹಾಕಲಾಗಿದೆ.

ಸೋಮವಾರ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಎಫ್‌ಪಿ) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎನ್ನುವ ವ್ಯಕ್ತಿ ಆರ್‌ಪಿಎಫ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಟಿಕಾ ರಾಮ್ ಮೀನಾ ಸೇರಿದಂತೆ ನಾಲ್ವರನ್ನು ಕೊಂದ ಭೀಕರ ಘಟನೆ ನಡೆದಿದೆ.

ಚೇತನ್ ಸಿಂಗ್ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಬೆಳಗ್ಗೆ 5 ಗಂಟೆಗೆ ತನ್ನ ಆಟೊಮ್ಯಾಟಿಕ್ ಗನ್‌ನಿಂದ ಆರ್‌ಪಿಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಟಿಕಾ ರಾಮ್ ಮೀನಾ (58), ಮೂವರು ಪ್ರಯಾಣಿಕರಾದ ಅಬ್ದುಲ್ ಖಾದಿರ್ ಭಾಯ್ ಮುಹಮ್ಮದ್ ಹುಸೈನ್ ಭಾನುಪುರ್ವಾಲ (62), ಅಖ್ತರ್ ಅಬ್ಬಾಸ್ ಅಲಿ (48) ಹಾಗೂ ಸದಾರ್ ಮುಹಮ್ಮದ್ ಹುಸೈನ್ (48) ಅವರನ್ನು ಹತ್ಯೆಗೈದಿದ್ದರು.

ಘಟನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ ಚೇತನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಪ್ರಶಂಸಿಸುತ್ತಿರುವುದು ಕೇಳಿ ಬಂದಿದೆ.

”ಅವರು (ಮುಸ್ಲಿಮರು) ಪಾಕಿಸ್ತಾನದ ಪರವಾಗಿ ಕಾರ್ಯನಿರ್ವಹಿಸುತ್ತಾರೆ. ಇದನ್ನೇ ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ” ಎಂದು ಸಿಂಗ್ ಹೇಳಿರುವುದು ಕೂಡ ವೀಡಿಯೊದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕ್ರೇನ್ ಅವಘಡ: 18 ಜನರ ಸಾವು

ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿದೆ. ಈ ಉನ್ನತ ಮಟ್ಟದ ಸಮಿತಿ ಮಂಗಳವಾರ ಮುಂಬೈಗೆ ತಲುಪಿದೆ ಹಾಗೂ ತನಿಖೆ ಆರಂಭಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಅಯ್ಯೂಬ್ ಮತ್ತು ಒವೈಸಿ ಅವರು ತಮ್ಮ ಟ್ವೀಟ್‌ಗಳಲ್ಲಿ “ಮುಸ್ಲಿಂ ವಿರೋಧಿ ದ್ವೇಷದ ಭಾಷಣ” ಕ್ಕೆ ನರೇಂದ್ರ ಮೋದಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ಭಾರತ ಸರ್ಕಾರದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ರೈಲು ಘಟನೆಯ ಕುರಿತು ನನ್ನ ಟ್ವೀಟ್ ಅನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಈ ಬಗ್ಗೆ ತಿಳಿಸಲು ಟ್ವಿಟರ್ ನನಗೆ ಪತ್ರ ಬರೆದಿದೆ. ಪ್ರಜಾಪ್ರಭುತ್ವದ ಮಾತೇ ಇಷ್ಟು” ಎಂದು ಆಯ್ಯೂಬ್ ಟ್ವೀಟ್ ಮಾಡಿದ್ದಾರೆ.

”#JaipurExpressTerrorAttack ಕುರಿತ ನನ್ನ ಟ್ವೀಟ್ ಅನ್ನು ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಭಾರತದಲ್ಲಿ ತಡೆಹಿಡಿಯಲಾಗಿದೆ. ಇದು ಯಾವ ಕಾನೂನನ್ನು ಉಲ್ಲಂಘಿಸಿದೆ? ಭಯೋತ್ಪಾದಕ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಕರೆಯುವುದು ಅಪರಾಧವೇ? ಮುಸ್ಲಿಮರ ವಿರುದ್ಧದ ದ್ವೇಷದ ಅಪರಾಧಗಳನ್ನು ತಡೆಗಟ್ಟುವಲ್ಲಿ ಮೋದಿ ಸರ್ಕಾರವು ಈ ಪೂರ್ವಭಾವಿಯಾಗಿದೆ ಎಂದು ಹಾರೈಸುತ್ತೇನೆ” ಎಂದು ಒವೈಸಿ ಪ್ರಶ್ನೆ ಮಾಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ಅಡಿಯಲ್ಲಿ ಭಾರತದಲ್ಲಿ ವೀಡಿಯೊವನ್ನು ತೆಗೆದುಹಾಕಲು ಕೇಂದ್ರವು Twitter ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...