Homeಮುಖಪುಟರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

- Advertisement -
- Advertisement -

ರೈಲ್ವೇ ಸಂರಕ್ಷಣಾ ಪಡೆಯ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ಎನ್ನುವವರು ಮೂವರು ಮುಸ್ಲಿಂ ಪ್ರಯಾಣಿಕರ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಪತ್ರಕರ್ತೆ ರಾಣಾ ಅಯ್ಯೂಬ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಾಡಿದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರದ ಬೇಡಿಕೆಯ ಮೇರೆಗೆ ತೆಗೆದುಹಾಕಲಾಗಿದೆ.

ಸೋಮವಾರ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಎಫ್‌ಪಿ) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎನ್ನುವ ವ್ಯಕ್ತಿ ಆರ್‌ಪಿಎಫ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಟಿಕಾ ರಾಮ್ ಮೀನಾ ಸೇರಿದಂತೆ ನಾಲ್ವರನ್ನು ಕೊಂದ ಭೀಕರ ಘಟನೆ ನಡೆದಿದೆ.

ಚೇತನ್ ಸಿಂಗ್ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಬೆಳಗ್ಗೆ 5 ಗಂಟೆಗೆ ತನ್ನ ಆಟೊಮ್ಯಾಟಿಕ್ ಗನ್‌ನಿಂದ ಆರ್‌ಪಿಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಟಿಕಾ ರಾಮ್ ಮೀನಾ (58), ಮೂವರು ಪ್ರಯಾಣಿಕರಾದ ಅಬ್ದುಲ್ ಖಾದಿರ್ ಭಾಯ್ ಮುಹಮ್ಮದ್ ಹುಸೈನ್ ಭಾನುಪುರ್ವಾಲ (62), ಅಖ್ತರ್ ಅಬ್ಬಾಸ್ ಅಲಿ (48) ಹಾಗೂ ಸದಾರ್ ಮುಹಮ್ಮದ್ ಹುಸೈನ್ (48) ಅವರನ್ನು ಹತ್ಯೆಗೈದಿದ್ದರು.

ಘಟನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ ಚೇತನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಪ್ರಶಂಸಿಸುತ್ತಿರುವುದು ಕೇಳಿ ಬಂದಿದೆ.

”ಅವರು (ಮುಸ್ಲಿಮರು) ಪಾಕಿಸ್ತಾನದ ಪರವಾಗಿ ಕಾರ್ಯನಿರ್ವಹಿಸುತ್ತಾರೆ. ಇದನ್ನೇ ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ” ಎಂದು ಸಿಂಗ್ ಹೇಳಿರುವುದು ಕೂಡ ವೀಡಿಯೊದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕ್ರೇನ್ ಅವಘಡ: 18 ಜನರ ಸಾವು

ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿದೆ. ಈ ಉನ್ನತ ಮಟ್ಟದ ಸಮಿತಿ ಮಂಗಳವಾರ ಮುಂಬೈಗೆ ತಲುಪಿದೆ ಹಾಗೂ ತನಿಖೆ ಆರಂಭಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಅಯ್ಯೂಬ್ ಮತ್ತು ಒವೈಸಿ ಅವರು ತಮ್ಮ ಟ್ವೀಟ್‌ಗಳಲ್ಲಿ “ಮುಸ್ಲಿಂ ವಿರೋಧಿ ದ್ವೇಷದ ಭಾಷಣ” ಕ್ಕೆ ನರೇಂದ್ರ ಮೋದಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ಭಾರತ ಸರ್ಕಾರದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ರೈಲು ಘಟನೆಯ ಕುರಿತು ನನ್ನ ಟ್ವೀಟ್ ಅನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಈ ಬಗ್ಗೆ ತಿಳಿಸಲು ಟ್ವಿಟರ್ ನನಗೆ ಪತ್ರ ಬರೆದಿದೆ. ಪ್ರಜಾಪ್ರಭುತ್ವದ ಮಾತೇ ಇಷ್ಟು” ಎಂದು ಆಯ್ಯೂಬ್ ಟ್ವೀಟ್ ಮಾಡಿದ್ದಾರೆ.

”#JaipurExpressTerrorAttack ಕುರಿತ ನನ್ನ ಟ್ವೀಟ್ ಅನ್ನು ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಭಾರತದಲ್ಲಿ ತಡೆಹಿಡಿಯಲಾಗಿದೆ. ಇದು ಯಾವ ಕಾನೂನನ್ನು ಉಲ್ಲಂಘಿಸಿದೆ? ಭಯೋತ್ಪಾದಕ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಕರೆಯುವುದು ಅಪರಾಧವೇ? ಮುಸ್ಲಿಮರ ವಿರುದ್ಧದ ದ್ವೇಷದ ಅಪರಾಧಗಳನ್ನು ತಡೆಗಟ್ಟುವಲ್ಲಿ ಮೋದಿ ಸರ್ಕಾರವು ಈ ಪೂರ್ವಭಾವಿಯಾಗಿದೆ ಎಂದು ಹಾರೈಸುತ್ತೇನೆ” ಎಂದು ಒವೈಸಿ ಪ್ರಶ್ನೆ ಮಾಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ಅಡಿಯಲ್ಲಿ ಭಾರತದಲ್ಲಿ ವೀಡಿಯೊವನ್ನು ತೆಗೆದುಹಾಕಲು ಕೇಂದ್ರವು Twitter ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...