Homeಮುಖಪುಟರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

ರೈಲ್ವೇ ಪೊಲೀಸ್‌ ಗುಂಡಿನ ದಾಳಿ ಕುರಿತು ಪತ್ರಕರ್ತೆ ಅಯ್ಯೂಬ್‌, ಓವೈಸಿ ಮಾಡಿದ ಟ್ವೀಟ್‌ಗೆ ಕೇಂದ್ರದ ತಡೆ

- Advertisement -
- Advertisement -

ರೈಲ್ವೇ ಸಂರಕ್ಷಣಾ ಪಡೆಯ ಕಾನ್‌ಸ್ಟೆಬಲ್‌ ಚೇತನ್ ಸಿಂಗ್ ಎನ್ನುವವರು ಮೂವರು ಮುಸ್ಲಿಂ ಪ್ರಯಾಣಿಕರ ಮೇಲೆ ಗುಂಡಿನ ದಾಳಿ ನಡೆಸಿದ ಕುರಿತು ಪತ್ರಕರ್ತೆ ರಾಣಾ ಅಯ್ಯೂಬ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಾಡಿದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರದ ಬೇಡಿಕೆಯ ಮೇರೆಗೆ ತೆಗೆದುಹಾಕಲಾಗಿದೆ.

ಸೋಮವಾರ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಎಫ್‌ಪಿ) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಎನ್ನುವ ವ್ಯಕ್ತಿ ಆರ್‌ಪಿಎಫ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಟಿಕಾ ರಾಮ್ ಮೀನಾ ಸೇರಿದಂತೆ ನಾಲ್ವರನ್ನು ಕೊಂದ ಭೀಕರ ಘಟನೆ ನಡೆದಿದೆ.

ಚೇತನ್ ಸಿಂಗ್ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಜುಲೈ 31ರಂದು ಬೆಳಗ್ಗೆ 5 ಗಂಟೆಗೆ ತನ್ನ ಆಟೊಮ್ಯಾಟಿಕ್ ಗನ್‌ನಿಂದ ಆರ್‌ಪಿಎಫ್‌ನ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಟಿಕಾ ರಾಮ್ ಮೀನಾ (58), ಮೂವರು ಪ್ರಯಾಣಿಕರಾದ ಅಬ್ದುಲ್ ಖಾದಿರ್ ಭಾಯ್ ಮುಹಮ್ಮದ್ ಹುಸೈನ್ ಭಾನುಪುರ್ವಾಲ (62), ಅಖ್ತರ್ ಅಬ್ಬಾಸ್ ಅಲಿ (48) ಹಾಗೂ ಸದಾರ್ ಮುಹಮ್ಮದ್ ಹುಸೈನ್ (48) ಅವರನ್ನು ಹತ್ಯೆಗೈದಿದ್ದರು.

ಘಟನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ ಚೇತನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಪ್ರಶಂಸಿಸುತ್ತಿರುವುದು ಕೇಳಿ ಬಂದಿದೆ.

”ಅವರು (ಮುಸ್ಲಿಮರು) ಪಾಕಿಸ್ತಾನದ ಪರವಾಗಿ ಕಾರ್ಯನಿರ್ವಹಿಸುತ್ತಾರೆ. ಇದನ್ನೇ ಮಾಧ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ” ಎಂದು ಸಿಂಗ್ ಹೇಳಿರುವುದು ಕೂಡ ವೀಡಿಯೊದಲ್ಲಿ ಕೇಳಿ ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕ್ರೇನ್ ಅವಘಡ: 18 ಜನರ ಸಾವು

ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿದೆ. ಈ ಉನ್ನತ ಮಟ್ಟದ ಸಮಿತಿ ಮಂಗಳವಾರ ಮುಂಬೈಗೆ ತಲುಪಿದೆ ಹಾಗೂ ತನಿಖೆ ಆರಂಭಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಮಾಡಲಾಗಿದೆ. ಅಯ್ಯೂಬ್ ಮತ್ತು ಒವೈಸಿ ಅವರು ತಮ್ಮ ಟ್ವೀಟ್‌ಗಳಲ್ಲಿ “ಮುಸ್ಲಿಂ ವಿರೋಧಿ ದ್ವೇಷದ ಭಾಷಣ” ಕ್ಕೆ ನರೇಂದ್ರ ಮೋದಿ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

”ಭಾರತ ಸರ್ಕಾರದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ರೈಲು ಘಟನೆಯ ಕುರಿತು ನನ್ನ ಟ್ವೀಟ್ ಅನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಈ ಬಗ್ಗೆ ತಿಳಿಸಲು ಟ್ವಿಟರ್ ನನಗೆ ಪತ್ರ ಬರೆದಿದೆ. ಪ್ರಜಾಪ್ರಭುತ್ವದ ಮಾತೇ ಇಷ್ಟು” ಎಂದು ಆಯ್ಯೂಬ್ ಟ್ವೀಟ್ ಮಾಡಿದ್ದಾರೆ.

”#JaipurExpressTerrorAttack ಕುರಿತ ನನ್ನ ಟ್ವೀಟ್ ಅನ್ನು ಭಾರತ ಸರ್ಕಾರದ ಕೋರಿಕೆಯ ಮೇರೆಗೆ ಭಾರತದಲ್ಲಿ ತಡೆಹಿಡಿಯಲಾಗಿದೆ. ಇದು ಯಾವ ಕಾನೂನನ್ನು ಉಲ್ಲಂಘಿಸಿದೆ? ಭಯೋತ್ಪಾದಕ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಕರೆಯುವುದು ಅಪರಾಧವೇ? ಮುಸ್ಲಿಮರ ವಿರುದ್ಧದ ದ್ವೇಷದ ಅಪರಾಧಗಳನ್ನು ತಡೆಗಟ್ಟುವಲ್ಲಿ ಮೋದಿ ಸರ್ಕಾರವು ಈ ಪೂರ್ವಭಾವಿಯಾಗಿದೆ ಎಂದು ಹಾರೈಸುತ್ತೇನೆ” ಎಂದು ಒವೈಸಿ ಪ್ರಶ್ನೆ ಮಾಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ಅಡಿಯಲ್ಲಿ ಭಾರತದಲ್ಲಿ ವೀಡಿಯೊವನ್ನು ತೆಗೆದುಹಾಕಲು ಕೇಂದ್ರವು Twitter ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...