Homeಮುಖಪುಟ'ಪಾಕಿಸ್ತಾನಿ' ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

- Advertisement -
- Advertisement -

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಮೇ 3 ರಂದು ನಡೆದ ರಸ್ತೆ ಗಲಭೆಯ ಘಟನೆಯ ಸಂದರ್ಭದಲ್ಲಿ 30 ವರ್ಷದ ಮುಸ್ಲಿಂ ವ್ಯಕ್ತಿ ಅಮೀರ್ ಪಠಾಣ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಸ್ಥಳೀಯ ಪತ್ರಕರ್ತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಗಲಾಟೆ ಸಂದರ್ಭದಲ್ಲಿ ಪತ್ರಕರ್ತನು ಅಮೀರ್ ಪಠಾಣ್ ಮೇಲೆ ಧರ್ಮಾಧಾರಿತವಾಗಿ ನಿಂದನೆ ಮಾಡಿದ್ದಾನೆ. ನೀನಿ ಪಾಕಿಸ್ತಾನಿಯೋ ಅಥವಾ ಕಾಶ್ಮೀರಿಯೋ” ಎಂದು ಪ್ರಶ್ನಿಸಿದ್ದಾನೆ. ಬಳಿಕ ಪಠಾಣ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಟನೆಯನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆನ್‌ಲೈನ್‌ನಲ್ಲಿ ವೀಡಿಯೊ ಪ್ರಸಾರವಾಗಿದ್ದರಿಂದ ಪಠಾಣ ಅವಮಾನಗೊಂಡಿದ್ದು, ಪತ್ರಕರ್ತನ ಬೆದರಿಕೆಗಳಿಂದ ನೊಂದಿದ್ದ ಅವರು ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಟೆಲಿಕಾಂ ಕಂಪನಿಯಲ್ಲಿ ಹಿರಿಯ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಪಠಾಣ್, ಮೇ 4 ರಂದು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅವರ ಪತ್ನಿ ಸಮ್ರಿನ್ ಪಠಾಣ್ ನೀಡಿದ ದೂರಿನ ನಂತರ ಮೇ 5 ರಂದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಔಪಚಾರಿಕ ಪ್ರಕರಣವನ್ನು ದಾಖಲಿಸಲಾಗಿದೆ.

ಡಿಜಿಟಲ್ ಸುದ್ದಿ ವೇದಿಕೆಯೊಂದಿಗೆ ಸಂಬಂಧ ಹೊಂದಿರುವ ಪತ್ರಕರ್ತ ಎಂದು ಗುರುತಿಸಲಾದ ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಎಂಐಸಿಡಿ ಲಾತೂರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ಪ್ರಕಾರ, ಈ ಘಟನೆ ಮೇ 3 ರ ರಾತ್ರಿ ನಡೆದಿದೆ.

ಧಾರಾಶಿವ್ ಜಿಲ್ಲೆಯ ಖಾಸಗಿ ಬ್ಯಾಂಕ್‌ನಲ್ಲಿ ಉಪ ವ್ಯವಸ್ಥಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ 29 ವರ್ಷದ ಸಮ್ರಿನ್, ತನ್ನ ಪತಿಯನ್ನು ಸಂವಿಧಾನ್ ಚೌಕ್‌ನಿಂದ ಕರೆದುಕೊಂಡು ಹೋಗಲು ಎಂದಿನಂತೆ ಕರೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಕರೆಯ ಸಮಯದಲ್ಲಿ, ತನ್ನ ಪತಿ ಒಬ್ಬ ವ್ಯಕ್ತಿಗೆ ತನಗೆ ನೋವುಂಟು ಮಾಡಬೇಡಿ ಎಂದು ಬೇಡಿಕೊಳ್ಳುವುದು ಹಾಗೂ ತನ್ನ ತಪ್ಪಿಲ್ಲ ಎಂದು ಮನವಿ ಮಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

“ಫೋನ್ ಕರೆಯ ಸಮಯದಲ್ಲಿ, ಇನ್ನೊಬ್ಬ ವ್ಯಕ್ತಿ ನನ್ನ ಪತಿಗೆ ತಾನು ಪತ್ರಕರ್ತ ಎಂದು ಹೇಳುವುದನ್ನು ನಾನು ಕೇಳಿಸಿಕೊಂಡೆ. ಅವನು ನನ್ನ ಪತಿ ಕಾಶ್ಮೀರದವನೋ ಅಥವಾ ಪಾಕಿಸ್ತಾನದವನೋ ಎಂದು ಪ್ರಶ್ನಿಸಿದನು. ನಂತರ ಪತಿಗೆ ಪತ್ರಕರ್ತ ಹೊಡೆದಿದ್ದಾನೆ. ನನ್ನ ಪತಿ ನೋವಿನಿಂದ ಕಿರುಚುವುದನ್ನು ನಾನು ಕೇಳಿದೆ” ಎಂದು ಸಮ್ರಿನ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಗಾಬರಿಗೊಂಡ ಸಮ್ರಿನ್ ಸ್ಥಳಕ್ಕೆ ಧಾವಿಸಿ ನೋಡಿದಾಗ ಎಂಎಚ್‌24 ಬಿಆರ್‌ 7008 ನೋಂದಣಿ ಸಂಖ್ಯೆಯ ಕಾರನ್ನು ಸ್ಥಳದಲ್ಲಿ ಕಂಡರು. ಅದನ್ನು ದಾಳಿಕೋರ ಬಳಸಿದ್ದಾನೆಂದು ನಂಬಲಾಗಿದೆ. ಆದರೂ, ಆಕೆ ಬರುವ ಹೊತ್ತಿಗೆ, ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದ.

ಹಲ್ಲೆಕೋರನು ಹಲ್ಲೆಯ ಚಿತ್ರಗಳು ಮತ್ತು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಮ್ರಿನ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನ್ನ ಪತಿ ಅದನ್ನು ಮುಂದುವರಿಸದಂತೆ ಬೇಡಿಕೊಂಡಳು. ಈ ಘಟನೆಯು ಅಮೀರ್ ಅವರನ್ನು ತೀವ್ರವಾಗಿ ತೊಂದರೆಗೊಳಿಸಿದೆ ಎಂದು ಅವರು ಹೇಳಿದ್ದಾರೆ.

“ತಾನು ಭಾರತೀಯನೆಂದು ಪಠಾಣ್ ಹೇಳಿದನು. ಆದರೆ ಆರೋಪಿಯು ಅವನನ್ನು ಸಾರ್ವಜನಿಕವಾಗಿ ಅವಮಾನಿಸಿ ಪಾಕಿಸ್ತಾನಿ ಎಂದು ಕರೆದು ವೀಡಿಯೊವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದನು. ನೋವಿನಿಂದ ಅವರು ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಹೇಳಿದರು; ನಾನು ಅವರನ್ನು ಸಮಾಧಾನಪಡಿಸಿದೆ. ಅವರ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸಿದೆ. ಮರುದಿನ, ವೀಡಿಯೊ ಪ್ರಸಾರವಾಗಿದೆಯೇ ಎಂದು ನೋಡಲು ಅವರು ನಿರಂತರವಾಗಿ ಇಂಟರ್ನೆಟ್ ಅನ್ನು ಪರಿಶೀಲಿಸುತ್ತಿದ್ದರು” ಎಂದು ಸಮ್ರಿನ್ ವಿವರಿಸಿದರು.

ಮೇ 4 ರ ಸಂಜೆ, ಕುಟುಂಬವರು ಮದುವೆಯ ಆರತಕ್ಷತೆಗೆ ಹೋಗುತ್ತಿದ್ದಾಗ, ಅಮೀರ್ ಅವರಿಗೆಲ್ಲಾ ಮೊದಲು ತೆರಳುವಂತೆ ಹೇಳಿದ್ದು, ಸ್ವಲ್ಪ ಹೊತ್ತಿನ ಬಳಿಕ ಸೇರುವುದಾಗಿ ಭರವಸೆ ನೀಡಿದ್ದರು. ಸುಮಾರು ಒಂದು ಗಂಟೆಯ ನಂತರ ಹಿಂತಿರುಗಿ ಬಂದು ನೋಡಿದಾಗ, ಅಮೀರ್ ಪಠಾಣ್ ದುಪಟ್ಟಾದಿಂದ ನೇಣು ಬಿಗಿದುಕೊಂಡಿರುವುದನ್ನು ಸಮ್ರಿನ್ ನೋಡಿದ್ದಾರೆ.

ಕುಟುಂಬದವರು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿನ ವೈದ್ಯರು ಅವರನ್ನು ಲಾತೂರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಕುಟುಂಬದವರು ಶಂಕಿತನ ಹೆಸರು ಮತ್ತು ವಾಹನ ನೋಂದಣಿ ಸಂಖ್ಯೆಯನ್ನು ನೀಡಿದ್ದರೂ, ಪೊಲೀಸರು ಆರಂಭದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

“ನಾವು ಪೊಲೀಸರಿಗೆ ಕಾರು ಸಂಖ್ಯೆ ಮತ್ತು ವಾಹನ ಚಾಲಕನ ಹೆಸರನ್ನು ನೀಡಿದ್ದೇವೆ. ಆದರೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ” ಎಂದು ಸಮ್ರಿನ್ ತಂದೆ ಅತ್ತೌಲ್ಲಾ ಪಠಾಣ್ ಹೇಳಿದರು.

“ಯಾವುದೇ ಆತ್ಮಹತ್ಯೆ ಪತ್ರ ಇರಲಿಲ್ಲ. ಆಪಾದಿತ ಘಟನೆಯ ಸಮಯದಲ್ಲಿ ಸ್ಥಳದಲ್ಲಿ ಇಲ್ಲದ ಪಠಾಣ್ ಅವರ ಪತ್ನಿಯ ಹೇಳಿಕೆಯ ಆಧಾರದ ಮೇಲೆ ನಾವು ಆತ್ಮಹತ್ಯಾ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದೇವೆ. ಆರೋಪಿಯು ಮೃತ ವ್ಯಕ್ತಿಯನ್ನು ನೀವು ಪಾಕಿಸ್ತಾನಿಯೇ ಎಂದು ಕೇಳಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ, ಆರೋಪಿಯನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಲಾತೂರ್ ಪೊಲೀಸ್ ವರಿಷ್ಠಾಧಿಕಾರಿ ಸೋಮಯ್ ಮುಂಡೆ ಹೇಳಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...