Homeಮುಖಪುಟಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ

ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನಿರ್ಣಯ ಅಂಗೀಕಾರ

- Advertisement -
- Advertisement -

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಭಾರತದ ಪ್ರಮುಖ ಪತ್ರಿಕಾ ಸಂಸ್ಥೆಗಳು ಮತ್ತು ಡಿಜಿಟಲ್ ಹಕ್ಕುಗಳ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯವನ್ನು ಉಲ್ಲಂಘಿಸುವ ಮತ್ತು ನಿರ್ಬಂಧಿಸುವ ವಿವಿಧ ಹೊಸ ಕಾನೂನುಗಳ ನಿಬಂಧನೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.

ಮೇ 28, 2024ರಂದು ನಡೆದ ಸಭೆಯಲ್ಲಿ ಮುಂಬೈ, ಕೋಲ್ಕತ್ತಾ, ಚಂಡೀಗಢ, ಮತ್ತು ತಿರುವನಂತಪುರಂ ಸೇರಿದಂತೆ ವಿವಿಧ ಪ್ರೆಸ್ ಕ್ಲಬ್‌ಗಳು, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್, ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಫ್ರೀಡಂ ಫೌಂಡೇಶನ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಸ್ತಾವಿತ ಬ್ರಾಡ್‌ಕಾಸ್ಟ್ ಸರ್ವೀಸಸ್ (ನಿಯಂತ್ರಣ) ಬಿಲ್- 2023, ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ ಆಕ್ಟ್-2023, ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ ಆಕ್ಟ್-2023 ಮತ್ತು ಮುಖ್ಯವಾಗಿ ಮಾಹಿತಿ ತಂತ್ರಜ್ಞಾನ ತಿದ್ದುಪಡಿ ನಿಯಮಗಳು-2023, ಅದರಲ್ಲಿ ಸುಳ್ಳು ಅಥವಾ ತಪ್ಪುದಾರಿಗೆಳೆಯುವಂತಿದೆ ಎಂದು ಭಾವಿಸಿದರೆ ಅದನ್ನು ತೆಗೆದುಹಾಕಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ, ಇದು ಪತ್ರಿಕೆಗಳನ್ನು ಮೌನಗೊಳಿಸುವ ತಂತ್ರ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ಜನರ ಮಾಹಿತಿ ಹಕ್ಕನ್ನು ತುಳಿಯದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಪುನರಾವರ್ತಿತ ಇಂಟರ್ನೆಟ್ ಸ್ಥಗಿತಗೊಳಿಸುವ ಕ್ರಮವು ನಾಗರಿಕರ ಮಾಹಿತಿ ಹಕ್ಕು ಮತ್ತು ಸುದ್ದಿಯನ್ನು ವರದಿ ಮಾಡುವ ಪತ್ರಕರ್ತರ ಸಾಮರ್ಥ್ಯ ಎರಡಕ್ಕೂ ಅಡ್ಡಿಯುಂಟು ಮಾಡುತ್ತದೆ. ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲು ಭಾರತದ ಸಂವಿಧಾನದ ಆರ್ಟಿಕಲ್ 19(1)(ಎ) ಅಡಿಯಲ್ಲಿ ನೀಡಲಾದ ಹಕ್ಕುಗಳ ಪರ ನಿಲ್ಲುವಂತೆ ಪತ್ರಿಕಾ ಸಂಸ್ಥೆಗಳಿಗೆ ನಿರ್ಣಯವು ಕರೆ ನೀಡಿದೆ.

ಮಾಹಿತಿ ಹಕ್ಕು ಕಾಯಿದೆ, 2005ನ್ನು ದುರ್ಬಲಗೊಳಿಸಲು ಉದ್ದೇಶಿಸಿರುವ ಡಿಜಿಟಲ್ ವೈಯಕ್ತಿಕ ಡೇಟಾ ಕಾಯಿದೆ-2023ರ ಎಲ್ಲಾ ನಿಬಂಧನೆಗಳನ್ನು ಸರ್ಕಾರವು ಅಳಿಸಬೇಕು ಅಥವಾ ತಿದ್ದುಪಡಿ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನಿರಂತರವಾಗಿ ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಿಂದ ಹೊರಹೊಮ್ಮುವ ಸವಾಲುಗಳನ್ನು ಎದುರಿಸಲು ಮಾಧ್ಯಮ ಮಂಡಳಿಗೆ ಅಧಿಕಾರ ನೀಡಬೇಕು,  ಮಧ್ಯಮ ಮಂಡಳಿ ಕಾರ್ಯನಿರತ ಪತ್ರಕರ್ತರು, ಒಕ್ಕೂಟಗಳ ಪ್ರತಿನಿಧಿಗಳು, ಮಾಧ್ಯಮ ಮಾಲೀಕರು ಮತ್ತು ಸರ್ಕಾರವನ್ನು ಒಳಗೊಂಡಿರಬೇಕು. ಮಾಧ್ಯಮ ಸಂಸ್ಥೆಗಳು, ಪ್ರಕಟಣೆಗಳು, ಪ್ರಸಾರ ಮತ್ತು ಡಿಜಿಟಲ್ ಪ್ರಕಟಿತ ವಿಷಯಗಳು ಮತ್ತು ಅದರ ಮಾಲೀಕರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರ ನೀಡಬೇಕು. ನಾಗರಿಕರ ಖಾಸಗಿತನದ ಹಕ್ಕನ್ನು ಎತ್ತಿಹಿಡಿಯುವ ಸಂದರ್ಭದಲ್ಲಿ ಪ್ರಸ್ತಾವಿತ ಕಾನೂನುಗಳು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಯಾಗದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಇದನ್ನು ಓದಿ: ಅರುಂಧತಿ ರಾಯ್, ಶೇಖ್ ಶೌಕತ್ ವಿರುದ್ಧ UAPAಯಡಿ ಪ್ರಕರಣ ದಾಖಲಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...