Homeಕರ್ನಾಟಕಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಪತ್ರಕರ್ತರಿಗೆ ಲಂಚ ನೀಡಿದ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್ ವಿಭಾಗದ ಎಡಿಜಿಪಿಗೆ ದೂರು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1 ಲಕ್ಷ ರೂ. ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವುದಾಗಿ ‘ದಿ ಫೈಲ್‌’ ವರದಿ ಮಾಡಿದೆ.

“ವಿಶ್ವಾಸನೀಯ ಮೂಲಗಳ ಪ್ರಕಾರ ಡೆಕ್ಕನ್ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್ ಬಾಕ್ಸ್‌ನಲ್ಲಿಯೇ 1 ಲಕ್ಷ ರೂ. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಪ್ರಜಾವಾಣಿಯ ಮುಖ್ಯ ವರದಿಗಾರ ವೈ.ಗ.ಜಗದೀಶ್ ಅವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ಜಗದೀಶ್‌ ಅವರೇ ಹಣ ಪಡೆದಿದ್ದನ್ನು ಖಚಿತಪಡಿಸಿ ಒಪ್ಪಿಕೊಂಡಿದ್ದರು. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಿದ್ದರು. ಅಲ್ಲದೇ ಜಗದೀಶ್ ಅವರೇ ಒಪ್ಪಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ.”

“ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪೋಸ್ಟ್‌ ಹಾಕಿರುವ ಹಿರಿಯ ಪತ್ರಕರ್ತರಾದ ರಾಜಾರಾಮ್‌ ತಲ್ಲೂರು, “ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ರಾಜ್ಯದ ಹಲವು ಪತ್ರಕರ್ತರಿಗೆ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬ ವದಂತಿಗಳು ಹಬ್ಬಿವೆ. ಇದು ಹೌದೆಂದಾಗಿದ್ದಲ್ಲಿ, ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ” ಎಂದಿದ್ದಾರೆ.

“ತಾವು ತಕ್ಷಣ ಈಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ, ಆ ಬಗ್ಗೆ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಕರ್ನಾಟಕದ ಜನತೆಯ ಪರವಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...