Homeಮುಖಪುಟಕೇರಳದ ಆನೆ ಸಾವಿನ ಬಗೆಗಿನ ಸುಳ್ಳಿಗಾಗಿ ಕ್ಷಮೆ ಕೇಳಿದ ಪತ್ರಕರ್ತ 'ದೀಪಕ್ ಚೌರಾಸಿಯ'

ಕೇರಳದ ಆನೆ ಸಾವಿನ ಬಗೆಗಿನ ಸುಳ್ಳಿಗಾಗಿ ಕ್ಷಮೆ ಕೇಳಿದ ಪತ್ರಕರ್ತ ‘ದೀಪಕ್ ಚೌರಾಸಿಯ’

- Advertisement -
- Advertisement -

ಹಂದಿಗೆ ಇಟ್ಟಿದ್ದ ಪಟಾಕಿ ತುಂಬಿದ ಅನನಾಸು ತಿಂದು ಮೃತಪಟ್ಟಿದ್ದ ಗರ್ಭಿಣಿ ಆನೆಯ ಘಟನೆಯನ್ನಿಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿದ್ದ ನ್ಯೂಸ್ ನೇಷನ್ ವಾಹಿನಿಯ ಪತ್ರಕರ್ತ ದೀಪಕ್ ಚೌರಾಸಿಯ ಇದೀಗ ತಮ್ಮಿಂದಾದ ತಪ್ಪಿಗೆ ಕ್ಷಮೆ ಕೇಳಿದ್ದಾರೆ.

ಇವರು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಆನೆಯ ಸಾವಿನ ಕುರಿತಂತೆ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು, ಅದರಲ್ಲಿ ದೀಪಕ್ ಚೌರಾಸಿಯಾ ”ಕೇರಳದ ಗರ್ಭಿಣಿ ಆನೆ ಹತ್ಯೆ ಪ್ರಕರಣದಲ್ಲಿ ಅಮ್ಜದ್ ಆಲಿ ಹಾಗೂ ತಮೀಮ್ ಶೇಖ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಬರೆದಿದ್ದರು. ಇದೀಗ ಈ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಆದರೆ ವಾಸ್ತವದಲ್ಲಿ ಕೇರಳ ಪೊಲೀಸರು ಈ ಪ್ರಕರಣದಲ್ಲಿ ಒಬ್ಬರನ್ನು ಬಂಧಿಸಿದ್ದರು ಹಾಗೂ ಅವರನ್ನು ‘ವಿಲ್ಸನ್’ ಎಂದು ಗುರುತಿಸಲಾಗಿತ್ತು. ಇದು ಅಲ್ಲಿನ ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು.

ಈಗ ದೀಪಕ್ ತಮ್ಮ ತಪ್ಪಿನ ಅರಿವಾಗಿದೆ ಎಂದು ಕ್ಷಮೆ ಯಾಚಿಸಿ ಟ್ವೀಟ್ ಮಾಡಿ ”ಕೇರಳದ ಆನೆಯ ವಿಷಯದಲ್ಲಿ ನನ್ನ ಖಾತೆಯಿಂದ ತಪ್ಪಾದ ಮಾಹಿತಿಯನ್ನು ಟ್ವೀಟ್ ಮಾಡಲಾಗಿದೆ. ಸರಿಯಾದ ಸಂಗತಿಗಳು ಬಹಿರಂಗವಾದ ತಕ್ಷಣ ನಾನು ಆ ಟ್ವೀಟ್ ಅನ್ನು ಅಳಿಸಿ ಹಾಕಿದ್ದೇನೆ. ನಾನು ಪತ್ರಕರ್ತ, ಇದರಲ್ಲಿ ವಿಶ್ವಾಸಾರ್ಹತೆಯೇ ಮುಖ್ಯವಾಗಿದೆ. ಈ ಸಮಯದಲ್ಲಿ ಯಾರಿಗಾದರು ನೋವಾಗಿದ್ದರೆ ವಿಷಾಧಿಸುತ್ತೇನೆ” ಎಂದು ಬರೆದಿದ್ದಾರೆ.

ದೀಪಕ್ ಚೌರಾಸಿಯ ಅವರ ಟ್ವೀಟ್ ಮುಸ್ಲಿಮರನ್ನು ದೂಷಿಸಲು ಯತ್ನಿಸಿ ದ್ವೇಷ ಹರಡುತ್ತಿದ್ದಾರೆ ಎಂದು ಹಲವಾರು ನೆಟ್ಟಿಗರು ಕಿಡಿ ಕಾರಿದ್ದರು.

‘ಆನೆ ಸಾವು’ ಘಟನೆ ಹಾಗೂ ನಂತರದ ಬೆಳವಣಿಗೆಯ ನಂತರ, ಕೇರಳದ ಜಾಲತಾಣಿಗರು ತಮ್ಮ ರಾಜ್ಯದ ಬಗ್ಗೆ ಹರಡುತ್ತಿರುವ ಸುಳ್ಳನ್ನು ವಿರೋಧಿಸಿ #KerlaComesOnTwitter ಎಂಬ ಅಭಿಯಾನ ನಡೆಸಿ ಸುಳ್ಳಿನ ವಿರುದ್ದ ಹೋರಾಡುವ ಒಂದು ದೊಡ್ಡ ತಂಡವನ್ನು ಕಟ್ಟಿಕೊಂಡಿದ್ದಾರೆ.


ಓದಿ: ಕೇರಳದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...