Homeಮುಖಪುಟಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

- Advertisement -
- Advertisement -

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು ನಿಂದನೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ತಾವು ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದರೂ, ಅವರು ಮಂದಹಾಸ ಬೀರುತ್ತಾ ಯಾವುದೇ ಉತ್ತರವಿಲ್ಲದೆ ಹೊರಟುಹೋದರು ಎಂದು ಪತ್ರಕರ್ತೆ ತಿಳಿಸಿದ್ದಾರೆ. ವಿಶೇಷವಾಗಿ ಸುದ್ದಿಗೋಷ್ಠಿಗಾಗಿ ಕರೆಯಲಾಗಿದ್ದ ಪತ್ರಕರ್ತರಿಂದ ಯಾವುದೇ ಪ್ರಶ್ನೆಗಳನ್ನು ಸ್ವೀಕರಿಸದೆ ಮುಖ್ಯಮಂತ್ರಿಯವರು ತಮ್ಮ ಭಾಷಣವನ್ನು ಮುಗಿಸಿ ತಕ್ಷಣವೇ ಹೊರಟುಹೋದರು ಎಂದು ಹಲವು ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ.

ಆದಿತ್ಯನಾಥ್ ಹೊರಟುಹೋದ ಬಳಿಕ ಸಭಾಂಗಣದ ಹಿಂಭಾಗದಿಂದ ಕೂಗಿದ ಶ್ರೀವಾಸ್ತವ ಅವರು, “ಮುಖ್ಯಮಂತ್ರಿಗಳೇ, ದಯವಿಟ್ಟು ಉತ್ತರಿಸಿ. ಇದೊಂದು ಸುದ್ದಿಗೋಷ್ಠಿ. ನಿಮಗೆ ಮಾಧ್ಯಮಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲವೇ, ಹೇಳಿ! ನಮ್ಮನ್ನು ಪ್ರೆಸ್ ಕಾನ್ಫರೆನ್ಸ್‌ಗೆ ಕರೆದದ್ದು ಯಾಕೆ? ನಿಮ್ಮ ಧ್ವನಿಯನ್ನು ಎತ್ತಲು ಮತ್ತು ನಿಮ್ಮ ಮಾತನ್ನು ಮಾತ್ರ ಕೇಳಿಸಿಕೊಳ್ಳಲಿಕ್ಕಾ” ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಬಿಜೆಪಿ ಬೆಂಬಲಿಗರ ಜೊತೆಗೆ ವಾಗ್ವಾದ

ನಾನು ಹೊರಡುವಾಗ, ಸ್ವಯಂಘೋಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲಿಗರು ತಾವು ಯಾವ ಚಾನೆಲ್ ಅನ್ನು ಪ್ರತಿನಿಧಿಸುತ್ತೀರಿ ಎಂದು ಕೇಳಿ ತಮ್ಮ ಮೇಲೆ ಕಿರುಚಾಡಲು ಪ್ರಾರಂಭಿಸಿದರು ಎಂದು ಶ್ರೀವಾಸ್ತವ ತಿಳಿಸಿದರು. ವಿರೋಧ ಪಕ್ಷವಾದ ಸಮಾಜವಾದಿ ಪಕ್ಷ ಅಥವಾ ಕಾಂಗ್ರೆಸ್‌ನಿಂದ ಕಳುಹಿಸಲ್ಪಟ್ಟ ವ್ಯಕ್ತಿ ಎಂಬಂತೆ ಆನ್‌ಲೈನ್‌ನಲ್ಲಿ ಮತ್ತೊಂದು ತಪ್ಪು ಕಥೆಯನ್ನು ಬಿತ್ತರಿಸಲಾಗುತ್ತಿದೆ ಎಂದು ವರದಿಗಾರ್ತಿ ಹೇಳಿದರು.

ನಾನು ಓರ್ವ ಸ್ವತಂತ್ರ ಪತ್ರಕರ್ತೆಯಾಗಿದ್ದು, ಈವೆಂಟ್‌ನಲ್ಲಿನ ತಮ್ಮ ಪ್ರಶ್ನೆಗಳ ಕುರಿತು ವಿಕೃತ ನಿರೂಪಣೆಯನ್ನು ಸೃಷ್ಟಿಸಲು ಈ ಊಹಾಪೋಹಗಳನ್ನು ಹುಟ್ಟುಹಾಕಲಾಗಿದೆ ಎಂದು ಅವರು ಈ ಆರೋಪಗಳನ್ನು ತಳ್ಳಿಹಾಕಿದರು.

ಸಿಜೆಪಿ, ಕಾಂಗ್ರೆಸ್ ಮತ್ತು ಎಸ್‌ಪಿಯಿಂದ ಯೋಗಿ ವಿರುದ್ಧ ವಾಗ್ದಾಳಿ

ವೀಡಿಯೊ ವೈರಲ್ ಆದ ನಂತರ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕಾಂಗ್ರೆಸ್ ಮತ್ತು ಎಸ್‌ಪಿ ಪಕ್ಷಗಳು ಸೆಪ್ಟೆಂಬರ್ 12, ಶನಿವಾರದಂದು ಮಾಧ್ಯಮಗಳೊಂದಿಗೆ ಸಂವಾದ ನಡೆಸದೆ ತೆರಳಿದ ಮುಖ್ಯಮಂತ್ರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು.

ವೀಡಿಯೊ ಹಂಚಿಕೊಂಡಿರುವ ಸಿಜೆಪಿ, “ಪ್ರತಿಷ್ಠಿತ ಪತ್ರಕರ್ತೆಯೊಬ್ಬರು ಪ್ರಶ್ನೆಗಳನ್ನು ಕೇಳುತ್ತಲೇ ಇರಲು, ಯುಪಿ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಿಂದ ಹೊರಟುಹೋದರು. ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ದೇಶಗಳಲ್ಲಿ 157 ನೇ ಸ್ಥಾನದಲ್ಲಿದ್ದೇವೆ ಎಂಬುದಕ್ಕೆ ಇದುವೇ ಅಚ್ಚುಕಟ್ಟಾದ ಉದಾಹರಣೆಯಾಗಿದೆ” ಎಂದು ಬರೆದುಕೊಂಡಿದೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾತನಾಡಿ, “ಉತ್ತರ ಪ್ರದೇಶದಲ್ಲಿ ಪ್ರಶ್ನೆಗಳು ತುಳುಕುತ್ತಿವೆ, ಆದರೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಬಳಿ ಯಾವ ಉತ್ತರವಿಲ್ಲ” ಎಂದು ಹೇಳಿದರು.

“ಹೆಸರುಗಳನ್ನು ಬದಲಿಸುತ್ತಲೇ ಇರುತ್ತಿರುವವರು ಈಗ ‘ಸುದ್ದಿಗೋಷ್ಠಿ’ ಹೆಸರನ್ನು ‘ಪ್ರೆಸ್ ಏಕಪಾತ್ರಾಭಿನಯ’ ಎಂದು ಬದಲಾಯಿಸಬೇಕು. ಏಕೆಂದರೆ ಕೇವಲ ಹೇಳಿಕೆಯನ್ನು ಮಾತ್ರ ನೀಡಬೇಕಾದಾಗ ಮತ್ತು ಪತ್ರಿಕೆಗೆ ಪ್ರಶ್ನೆಗಳನ್ನು ಕೇಳುವ ಹಕ್ಕಿಲ್ಲದಂದಾಗ, ಸಂಭಾಷಣೆಯಿಲ್ಲದೆ ಆ ‘ಕಾನ್ಫರೆನ್ಸ್’ ಪದಕ್ಕೆ ಏನು ಅರ್ಥವಿರುತ್ತದೆ” ಎಂದು ಅಖಿಲೇಶ್‌ ಪ್ರಶ್ನಿಸಿದ್ದಾರೆ.

“ಸತ್ಯವೆಂದರೆ ಯುಪಿಯಲ್ಲಿ ಪ್ರಶ್ನೆಗಳು ತುಂಬಿ ತುಳುಕುತ್ತಿವೆ, ಆದರೆ ಅವರ ಬಳಿ ಯಾವುದೇ ಉತ್ತರವಿಲ್ಲ. ತಿರುಗಿ ನಡೆಯುವುದು ಅಥವಾ ಮೈದಾನದಿಂದ ಓಡಿಹೋಗುವುದು ಎಂದೂ ಕೂಡ ಇದನ್ನೇ ಕರೆಯುತ್ತಾರೆ. ಅವರು ಆಡಳಿತದಲ್ಲಿ ತಾರತಮ್ಯವನ್ನು ಮತ್ತು ಸುದ್ದಿಗೋಷ್ಠಿಗಳಲ್ಲಿ ಏಕಪಕ್ಷೀಯ ಆರ್ಭಟವನ್ನು ತೋರಿಸುತ್ತಾರೆ. ಈಗ ಅವರು ‘ಪ್ರಶ್ನೆಗಳನ್ನು ಕೇಳುವ ಮೂಡ್‌ನಲ್ಲಿಲ್ಲ’ ಎಂದೂ ಹೇಳುತ್ತಾರೆಯೇ” ಎಂದು ಟೀಕಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...