Homeಮುಖಪುಟಉನ್ನಾವ್: ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ, ಪೊಲೀಸ್ ಸಿಬ್ಬಂದಿ ಮೇಲೆ FIR

ಉನ್ನಾವ್: ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ, ಪೊಲೀಸ್ ಸಿಬ್ಬಂದಿ ಮೇಲೆ FIR

ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ರೈಲ್ವೆ ಕ್ರಾಸಿಂಗ್ ಬಳಿ ಸ್ಥಳೀಯ ಪತ್ರಕರ್ತ ಸೂರಜ್ ಪಾಂಡೆ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದ್ದು, ಮಹಿಳಾ ಸಬ್ ಇನ್ಸ್‌ಪೆಕ್ಟರ್ ಮತ್ತು ಪುರುಷ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ರಕರ್ತ ಸೂರಜ್ ಪಾಂಡೆ ತಾಯಿ ಲಕ್ಷ್ಮಿ ದೇವಿ, ಮಹಿಳಾ ಇನ್ಸ್‌ಪೆಕ್ಟರ್ ಸುನೀತಾ ಚೌರಾಸಿಯಾ ಮತ್ತು ಕಾನ್‌ಸ್ಟೆಬಲ್ ಅಮರ್ ಸಿಂಗ್ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

‘’ಅವನನ್ನು ಕೊಲೆ ಮಾಡಲಾಗಿದೆ’’ ಎಂದು ಸೂರಜ್ ಪಾಂಡೆಯ ಚಿಕ್ಕಪ್ಪ ಹೇಳಿದ್ದಾರೆ. “ಯಾರೋ ಅವನನ್ನು ಎಲ್ಲೋ ಕರೆದುಕೊಂಡು ಹೋಗಲು ಬಂದಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ, ಆತನನ್ನು ಕರೆದೊಯ್ಯುವ ವ್ಯಕ್ತಿ, ಕೊಲೆ ಮಾಡಿದ ವ್ಯಕ್ತಿ ಯಾರು ಎಂದು ತಿಳಿದುಬರುತ್ತದೆ ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸೂರಜ್ ಪಾಂಡೆಗೆ ಇಬ್ಬರು ಬೆದರಿಕೆ ಹಾಕಿದ್ದಾರೆ ಮತ್ತು ಕೊಲೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದ ನಂತರ, ಮಹಿಳಾ ಎಸ್‌ಐ ಸುನೀತಾ ಚೌರಾಶಿಯಾ ಮತ್ತು ಆಕೆಯ ಚಾಲಕ ಕಾನ್‌ಸ್ಟೆಬಲ್ ಅಮರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಉನ್ನಾವ್ ಎಸ್‌ಪಿ ಸುರೇಶರಾವ್ ಎ. ಕುಲಕರ್ಣಿ ತಿಳಿಸಿದ್ದಾರೆ. ಜೊತೆಗೆ ಎಸ್‌ಐ ಪತ್ರಕರ್ತರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಕುಲಕರ್ಣಿ ತಿಳಿಸಿದ್ದಾರೆ.

ಇದನ್ನೂ ಓದಿ: ಉನ್ನಾವ್‌ ಅತ್ಯಾಚಾರ ಸಂತ್ರಸ್ತೆಯ ತಂದೆ ಕೊಲೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ 10 ವರ್ಷ ಜೈಲು

ಆದರೂ, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯ ಪ್ರಕರಣವೆಂದು ತೋರುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಶವ ಮರಣೋತ್ತರ ವರದಿಯಲ್ಲಿ ಕಂಡುಬರುವ ಗಾಯಗಳು ರೈಲು ಅಪಘಾತದಲ್ಲಿ ಉಂಟಾಗಿರುವಂತಿವೆ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಲಲಿತ್‌ಪುರದ ಗ್ರಾಮ ಪ್ರಧಾನ್ ಅವರ ಕುಟುಂಬವು ನರೇಗಾ ಕೆಲಸಕ್ಕೆ ಕಾರ್ಮಿಕರನ್ನು ನೇಮಿಸಿಕೊಳ್ಳುವ ಬದಲು ಅಕ್ರಮವಾಗಿ ಯಂತ್ರಗಳನ್ನು ಬಳಸುತ್ತಿರುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ಲಲಿತ್‌ಪುರದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.

ನ್ಯೂಸ್ ಪೋರ್ಟಲ್ ಬುಂದೇಲ್‌ಖಂಡ್ ಟೈಮ್ಸ್ ಟಿವಿಯನ್ನು ನಡೆಸುತ್ತಿರುವ ಮತ್ತು ಇತರ ಪತ್ರಿಕೆಗಳಿಗೆ ಸ್ಟ್ರಿಂಜರ್ ಆಗಿ ಕೆಲಸ ಮಾಡುತ್ತಿರುವ ವಿನಯ್ ತಿವಾರಿ ಅವರ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆಯಿಂದ ಅವರ ಕೈ ಮತ್ತು ಕಾಲಿನಲ್ಲಿ ಮುರಿತ ಉಂಟಾಗಿದೆ. ಜೊತೆಗೆ ದೇಹದ ತುಂಬಾ ಮೂಗೇಟುಗಳು ಉಳಿದಿವೆ.

ಹಲ್ಲೆ ಮತ್ತು ಕೊಲೆ ಯತ್ನಕ್ಕಾಗಿ ಪೊಲೀಸರು ಸ್ಥಳೀಯ ಗ್ರಾಮ ಪ್ರಧಾನ್, ಅವರ ಪತಿ ಮತ್ತು ಮೂವರು ಗಂಡು ಮಕ್ಕಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...